ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವೀಯ ಗುಣವಿಲ್ಲದರು ಮನುಷ್ಯರೆ ಅಲ್ಲ: ಲೇಖಕ ಬಿ.ಎಸ್. ಗವಿಮಠ

ಸಂಗೀತ ಕಲಾವಿದರಿಗೆ ಆಹಾರ ಕಿಟ್ ವಿತರಣೆ
Last Updated 19 ಮೇ 2020, 11:01 IST
ಅಕ್ಷರ ಗಾತ್ರ

ಬೆಳಗಾವಿ: ‘ಕೊರೊನಾ ವೈರಸ್‌ ಹಾಗೂ ಲಾಕ್‌ಡೌನ್‌ನಿಂದಾಗಿ ಉಂಟಾಗಿರುವ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಪ್ರತಿಯೊಬ್ಬರೂ ಮಾನವೀಯತೆಯಿಂದ ನಡೆದುಕೊಳ್ಳಬೇಕು. ಮನುಷ್ಯತ್ವ ಹಾಗೂ ಮಾನವೀಯತೆ ಬಿಟ್ಟವರು ಮನುಷ್ಯರೆ ಅಲ್ಲ’ ಎಂದು ಎಂದು ಹಿರಿಯ ಲೇಖಕ ಬಿ.ಎಸ್. ಗವಿಮಠ ಹೇಳಿದರು.

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯಿಂದ ಇಲ್ಲಿನ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೂವತ್ತು ಸಂಗೀತ ಕಲಾವಿದರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿ ಅವರು ಮಾತನಾಡಿದರು.

‘ಕವಿ ಸಿದ್ದಯ್ಯ ಪುರಾಣಿಕರ ಏನಾದರೂ ಆಗು ಮೊದಲು ಮಾನವನಾಗು ಎಂಬ ಕವಿವಾಣಿಯನ್ನು ಮರೆಯಬಾರದು. ನಾವು ದಾನ ಮಾಡಿದೆವು; ಅವರು ದಾನ ಮಾಡಿದರು ಎಂಬ ಮಾತೆಲ್ಲ ಸುಳ್ಳು. ಎಲ್ಲವೂ ಮೇಲಿರುವ ಪರಮಾತ್ಮನಿಗೆ ಸೇರಿದ್ದು. ಎರಡು ತಿಂಗಳಿಂದ ಹಸಿದವರತ್ತ ನಮ್ಮ ಚಿತ್ತ ಅಭಿಯಾನ ನಡೆಸಿಕೊಂಡು ಬಂದಿರುವ ಕ್ರಿಯಾ ಸಮಿತಿಯ ಸೇವೆ ಸಾಮಾನ್ಯ ಸಂಗತಿಯಲ್ಲ. ಇದೊಂದು ದಾಖಲೆಯಾಗಿ ಉಳಿಯಲಿದೆ’ ಎಂದರು.

ಹಿರಿಯ ಸಾಹಿತಿ ಶಿರೀಶ ಜೋಶಿ ಮಾತನಾಡಿ, ‘ಸಂಗೀತ ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸಿ ಅವರಿಗೆ ಆಹಾರ ಧಾನ್ಯ ಒದಗಿಸಿದ್ದು ರಾಜ್ಯದಲ್ಲಿಯೇ ಇದೇ ಮೊದಲಾಗಿದೆ. ಇಂದು ರಂಗಭೂಮಿ ಹಾಗೂ ಸಂಗೀತ ಕಲಾವಿದರು ನಿಜವಾಗಿಯೂ ಸಂಕಷ್ಟದಲ್ಲಿ ಇದ್ದಾರೆ. ಅವರಿಗೆ ಪರಿಹಾರ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಕೋರಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮಾತನಾಡಿ, ‘ಸಾಹಿತಿಗಳು ಮತ್ತು ಕಲಾವಿದರಿಗೆ ಆರ್ಥಿಕ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಈಗಾಗಲೇ ಕ್ರಮ ಕೈಕೊಂಡಿದೆ. ಸರ್ಕಾರದ ಆದೇಶದಂತೆ ಕಲಾವಿದರು, ಸಾಹಿತಿಗಳ ಪಟ್ಟಿಯನ್ನು ಸಲ್ಲಿಸಲಾಗಿದೆ’ ಎಂದರು.

ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ, ‘ಎರಡು ತಿಂಗಳಿಂದ ನಡೆದಿರುವ ಅಭಿಯಾನವು ಇನ್ನೂ ಮುಂದುವರಿಯಲಿದೆ. ಹೆಚ್ಚೆಚ್ಚು ದಾನಿಗಳು ಮುಂದೆ ಬರಬೇಕು’ ಎಂದು ಮನವಿ ಮಾಡಿದರು.

ಕ್ರಿಯಾ ಸಮಿತಿಯ ಸಾಗರ ಬೋರಗಲ್ಲ, ಹರೀಶ ಕರಿಗೊಣ್ಣವರ, ವೀರೇಂದ್ರ ಗೋಬರಿ ಇದ್ದರು.

ಗಾಯಕ ಸುರೇಶ ಚಂದರಗಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT