ರಾಮದುರ್ಗ (ಬೆಳಗಾವಿ ಜಿಲ್ಲೆ): ‘ಮುದೇನೂರು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ವಾಂತಿ ಭೇದಿ ಸಮಸ್ಯೆ ತಲೆದೋರಿದೆ. ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ದಿನದಿನಕ್ಕೆ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಜಿಲ್ಲಾಧಿಕಾರಿ ಆಗಲಿ ಸ್ಥಳಕ್ಕೆ ಬಂದಿಲ್ಲ. ನಮ್ಮ ಕಷ್ಟ ನೋಡಿಲ್ಲ’ ಎಂದು ಹಲವರು ಆಕ್ರೋಶ ಹೊರಹಾಕಿದರು.