<p><strong>ಬೆಳಗಾವಿ</strong>: ‘ಕಿರು ಆಹಾರ ಸಂಸ್ಕರಣಾ ಉದ್ಯಮಗಳ ಸ್ಥಾಪನೆಗಾಗಿ ಕೇಂದ್ರ ಸರ್ಕಾರದಿಂದ ₹9 ಲಕ್ಷ, ರಾಜ್ಯದಿಂದ ₹6 ಲಕ್ಷ ಸೇರಿದಂತೆ ₹15 ಲಕ್ಷದವರೆಗೆ ಗರಿಷ್ಠ ಮಟ್ಟದ ಸಬ್ಸಿಡಿ ನೀಡಲಾಗುತ್ತಿದೆ. ಈವರೆಗೆ ಜಿಲ್ಲೆಯ 633 ಫಲಾನುಭವಿಗಳಿಗೆ ₹21.65 ಕೋಟಿ ಸಬ್ಸಿಡಿ ಕೊಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿನ ಶಿವಬಸವ ನಗರದ ಕೆಪಿಟಿಸಿಎಲ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧ ಗೊಳಿಸುವಿಕೆ (ಪಿಎಂಎಫ್ಎಂಇ) ಯೋಜನೆ ಕುರಿತು ಜಿಲ್ಲಾಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಒಂದು ವೇಳೆ ₹30 ಲಕ್ಷಕ್ಕಿಂತ ಯೋಜನಾ ವೆಚ್ಚ ಕಡಿಮೆ ಇದ್ದಲ್ಲಿ ಶೇ 50ರಷ್ಟು ಸಬ್ಸಿಡಿ ಸಿಗಲಿದೆ. ಇದರೊಂದಿಗೆ ಬ್ಯಾಂಕ್ಗಳಿಂದ ಒಂದಿಷ್ಟು ಸಾಲ ಸೌಲಭ್ಯ ಪಡೆದು ಉದ್ಯಮಗಳನ್ನು ಸ್ಥಾಪಿಸಬೇಕು. ಜೀವನದಲ್ಲಿ ತಾವು ಕಲಿತ ಕೌಶಲ ಪ್ರಯೋಗ ರೂಪಕ್ಕಿಳಿಸಲು ಇದು ಉತ್ತಮ ಅವಕಾಶ’ ಎಂದರು.</p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರದ ರಿಯಾಯಿತಿ ಸೌಕರ್ಯದ ನೆರವಿನಿಂದ ಸ್ಥಳೀಯವಾಗಿ ಕಿರು ಆಹಾರ ಸಂಸ್ಕರಣಾ ಉದ್ಯಮ ಸ್ಥಾಪಿಸಿ, ಆರ್ಥಿಕವಾಗಿ ಸಬಲರಾಗಬೇಕು’ ಎಂದು </p>.<p>‘ಇಂದು ದೊಡ್ಡ ಉದ್ಯಮಿಗಳಾದವರೆಲ್ಲ ಆರಂಭದಲ್ಲಿ ಕಿರು ಉದ್ಯಮಗಳನ್ನು ಮಾಡುತ್ತ ಬೆಳೆದವರೇ. ಅವರನ್ನು ನೀವು ಪ್ರೇರಣೆಯಾಗಿ ಇಟ್ಟುಕೊಂಡು ಮುನ್ನಡೆಯಬೇಕು. ಮನೆಯಲ್ಲೇ ಒಂದು ಉತ್ಪನ್ನ ಸಿದ್ಧಪಡಿಸಿ ಬ್ರ್ಯಾಂಡಿಂಗ್ ಮಾಡಿ, ಮಾರುಕಟ್ಟೆಗೆ ತರಬೇಕು. ಈ ಯೋಜನೆಯಡಿ ಹಿಟ್ಟಿನ ಗಿರಣಿ ತೆರೆಯಬಹುದು. ಬೇಕರಿ ಉತ್ಪನ್ನಗಳು, ಮಸಾಲೆ ಪದಾರ್ಥಗಳು, ಚಪ್ಪಾತಿ ಸಿದ್ಧಪಡಿಸಬಹುದು. ಜೇನು ಸಂಸ್ಕರಣೆ ಮಾಡಬಹುದು’ ಎಂದು ತಿಳಿಸಿದರು.</p>.<div><blockquote>ಕೆಲಸಕ್ಕಾಗಿ ಬೆಂಗಳೂರಿಗೆ ಅಥವಾ ವಿದೇಶಕ್ಕೆ ಹೋಗಬೇಕಿಲ್ಲ. ನಿಮ್ಮೂರಿನಲ್ಲಿ ಸಾಧ್ಯವಿರುವ ಉದ್ಯಮ ಸ್ಥಾಪಿಸಿ. ಅದಕ್ಕೆ ಸರ್ಕಾರ ಪ್ರೋತ್ಸಾಹ ಕೊಡಲಿದೆ </blockquote><span class="attribution">ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ</span></div>.<p>ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ(ಕೆಪೆಕ್) ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಉಪಸ್ಥಿತರಿದ್ದರು. ಕೃಷಿ ಇಲಾಖೆ ಜಂಟಿನಿರ್ದೇಶಕ ಎಚ್.ಡಿ.ಕೋಳೇಕರ ಸ್ವಾಗತಿಸಿದರು. </p>.<p>ಇದೇವೇಳೆ, ಪಿಎಂಎಫ್ಎಂಇ ಯೋಜನೆಯಡಿ ಸಿದ್ಧಪಡಿಸಿದ ಉತ್ಪನ್ನಗಳನ್ನು ಪ್ರದರ್ಶಿಸಲಾಯಿತು. ಬ್ಯಾಂಕ್ಗಳಲ್ಲಿ ಲಭ್ಯವಿರುವ ಸಾಲ ಸೌಲಭ್ಯ, ದಾಖಲೆಗಳ ಕುರಿತು ಮಾಹಿತಿ ನೀಡಲಾಯಿತು.</p>.<p> <strong>‘ಗುಣಮಟ್ಟಕ್ಕೆ ಆದ್ಯತೆ ನೀಡಿ’ </strong></p><p>‘ಆಹಾರ ಉದ್ಯಮದಲ್ಲಿ ನಾವು ಅಗ್ರಸ್ಥಾನಕ್ಕೆ ಏರುವ ಅವಶ್ಯಕತೆ ಇದೆ. ಯಾರು ಗುಣಮಟ್ಟಕ್ಕೆ ಆದ್ಯತೆ ನೀಡುತ್ತಾರೆಯೋ ಮತ್ತು ಗ್ರಾಹಕರ ವಿಶ್ವಾಸ ಗಳಿಸುತ್ತಾರೆಯೋ ಅವರು ಉದ್ಯಮ ರಂಗದಲ್ಲಿ ಬೆಳೆಯಲು ಸಾಧ್ಯವಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ ವಾರ್ಷಿಕ 1500 ಜನರಿಗೆ ಕಿರು ಉದ್ಯಮ ಸ್ಥಾಪಿಸಲು ಅವಕಾಶವಿದೆ’ ಎಂದು ಸತೀಶ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕಿರು ಆಹಾರ ಸಂಸ್ಕರಣಾ ಉದ್ಯಮಗಳ ಸ್ಥಾಪನೆಗಾಗಿ ಕೇಂದ್ರ ಸರ್ಕಾರದಿಂದ ₹9 ಲಕ್ಷ, ರಾಜ್ಯದಿಂದ ₹6 ಲಕ್ಷ ಸೇರಿದಂತೆ ₹15 ಲಕ್ಷದವರೆಗೆ ಗರಿಷ್ಠ ಮಟ್ಟದ ಸಬ್ಸಿಡಿ ನೀಡಲಾಗುತ್ತಿದೆ. ಈವರೆಗೆ ಜಿಲ್ಲೆಯ 633 ಫಲಾನುಭವಿಗಳಿಗೆ ₹21.65 ಕೋಟಿ ಸಬ್ಸಿಡಿ ಕೊಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿನ ಶಿವಬಸವ ನಗರದ ಕೆಪಿಟಿಸಿಎಲ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧ ಗೊಳಿಸುವಿಕೆ (ಪಿಎಂಎಫ್ಎಂಇ) ಯೋಜನೆ ಕುರಿತು ಜಿಲ್ಲಾಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಒಂದು ವೇಳೆ ₹30 ಲಕ್ಷಕ್ಕಿಂತ ಯೋಜನಾ ವೆಚ್ಚ ಕಡಿಮೆ ಇದ್ದಲ್ಲಿ ಶೇ 50ರಷ್ಟು ಸಬ್ಸಿಡಿ ಸಿಗಲಿದೆ. ಇದರೊಂದಿಗೆ ಬ್ಯಾಂಕ್ಗಳಿಂದ ಒಂದಿಷ್ಟು ಸಾಲ ಸೌಲಭ್ಯ ಪಡೆದು ಉದ್ಯಮಗಳನ್ನು ಸ್ಥಾಪಿಸಬೇಕು. ಜೀವನದಲ್ಲಿ ತಾವು ಕಲಿತ ಕೌಶಲ ಪ್ರಯೋಗ ರೂಪಕ್ಕಿಳಿಸಲು ಇದು ಉತ್ತಮ ಅವಕಾಶ’ ಎಂದರು.</p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರದ ರಿಯಾಯಿತಿ ಸೌಕರ್ಯದ ನೆರವಿನಿಂದ ಸ್ಥಳೀಯವಾಗಿ ಕಿರು ಆಹಾರ ಸಂಸ್ಕರಣಾ ಉದ್ಯಮ ಸ್ಥಾಪಿಸಿ, ಆರ್ಥಿಕವಾಗಿ ಸಬಲರಾಗಬೇಕು’ ಎಂದು </p>.<p>‘ಇಂದು ದೊಡ್ಡ ಉದ್ಯಮಿಗಳಾದವರೆಲ್ಲ ಆರಂಭದಲ್ಲಿ ಕಿರು ಉದ್ಯಮಗಳನ್ನು ಮಾಡುತ್ತ ಬೆಳೆದವರೇ. ಅವರನ್ನು ನೀವು ಪ್ರೇರಣೆಯಾಗಿ ಇಟ್ಟುಕೊಂಡು ಮುನ್ನಡೆಯಬೇಕು. ಮನೆಯಲ್ಲೇ ಒಂದು ಉತ್ಪನ್ನ ಸಿದ್ಧಪಡಿಸಿ ಬ್ರ್ಯಾಂಡಿಂಗ್ ಮಾಡಿ, ಮಾರುಕಟ್ಟೆಗೆ ತರಬೇಕು. ಈ ಯೋಜನೆಯಡಿ ಹಿಟ್ಟಿನ ಗಿರಣಿ ತೆರೆಯಬಹುದು. ಬೇಕರಿ ಉತ್ಪನ್ನಗಳು, ಮಸಾಲೆ ಪದಾರ್ಥಗಳು, ಚಪ್ಪಾತಿ ಸಿದ್ಧಪಡಿಸಬಹುದು. ಜೇನು ಸಂಸ್ಕರಣೆ ಮಾಡಬಹುದು’ ಎಂದು ತಿಳಿಸಿದರು.</p>.<div><blockquote>ಕೆಲಸಕ್ಕಾಗಿ ಬೆಂಗಳೂರಿಗೆ ಅಥವಾ ವಿದೇಶಕ್ಕೆ ಹೋಗಬೇಕಿಲ್ಲ. ನಿಮ್ಮೂರಿನಲ್ಲಿ ಸಾಧ್ಯವಿರುವ ಉದ್ಯಮ ಸ್ಥಾಪಿಸಿ. ಅದಕ್ಕೆ ಸರ್ಕಾರ ಪ್ರೋತ್ಸಾಹ ಕೊಡಲಿದೆ </blockquote><span class="attribution">ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ</span></div>.<p>ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ(ಕೆಪೆಕ್) ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಉಪಸ್ಥಿತರಿದ್ದರು. ಕೃಷಿ ಇಲಾಖೆ ಜಂಟಿನಿರ್ದೇಶಕ ಎಚ್.ಡಿ.ಕೋಳೇಕರ ಸ್ವಾಗತಿಸಿದರು. </p>.<p>ಇದೇವೇಳೆ, ಪಿಎಂಎಫ್ಎಂಇ ಯೋಜನೆಯಡಿ ಸಿದ್ಧಪಡಿಸಿದ ಉತ್ಪನ್ನಗಳನ್ನು ಪ್ರದರ್ಶಿಸಲಾಯಿತು. ಬ್ಯಾಂಕ್ಗಳಲ್ಲಿ ಲಭ್ಯವಿರುವ ಸಾಲ ಸೌಲಭ್ಯ, ದಾಖಲೆಗಳ ಕುರಿತು ಮಾಹಿತಿ ನೀಡಲಾಯಿತು.</p>.<p> <strong>‘ಗುಣಮಟ್ಟಕ್ಕೆ ಆದ್ಯತೆ ನೀಡಿ’ </strong></p><p>‘ಆಹಾರ ಉದ್ಯಮದಲ್ಲಿ ನಾವು ಅಗ್ರಸ್ಥಾನಕ್ಕೆ ಏರುವ ಅವಶ್ಯಕತೆ ಇದೆ. ಯಾರು ಗುಣಮಟ್ಟಕ್ಕೆ ಆದ್ಯತೆ ನೀಡುತ್ತಾರೆಯೋ ಮತ್ತು ಗ್ರಾಹಕರ ವಿಶ್ವಾಸ ಗಳಿಸುತ್ತಾರೆಯೋ ಅವರು ಉದ್ಯಮ ರಂಗದಲ್ಲಿ ಬೆಳೆಯಲು ಸಾಧ್ಯವಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ ವಾರ್ಷಿಕ 1500 ಜನರಿಗೆ ಕಿರು ಉದ್ಯಮ ಸ್ಥಾಪಿಸಲು ಅವಕಾಶವಿದೆ’ ಎಂದು ಸತೀಶ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>