ಪರಿಹಾರ ಹೆಚ್ಚಿಸಿ:‘ರಾಜ್ಯದಾದ್ಯಂತ 8 ಲಕ್ಷ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, ಹತ್ತಿ, ಮೆಕ್ಕೆಜೋಳ, ಭತ್ತ ಸೇರಿ ಇನ್ನಿತರ ಬೆಳೆಗಳು ನಾಶವಾಗಿವೆ. ಈಗ ಹೆಕ್ಟೇರ್ಗೆ ₹ 36,000 ಪರಿಹಾರ ಕೊಡಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಿಸಿ ಹೆಕ್ಟೇರ್ಗೆ ₹ 1 ಲಕ್ಷ ಪರಿಹಾರ ಕೊಡಬೇಕು. ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಹೊಸದಾಗಿ ದೀರ್ಘಾವಧಿ ಸಾಲವನ್ನು ಬಡ್ಡಿ ರಹಿತವಾಗಿ ಕೊಡುವ ಯೋಜನೆ ರೂಪಿಸಬೇಕು. ಫಸಲ್ ವಿಮಾ ಯೋಜನೆಯಡಿ ವಿಮೆ ಮಾಡಿಸಿರುವ ರೈತರಿಗೆ ಕೂಡಲೇ ಪರಿಹಾರ ಪಾವತಿ ಮಾಡಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.