<p><strong>ಬೆಳಗಾವಿ:</strong> ಬೇರೆ ವೃತ್ತಗಳಂತೆ ತಮಗೂ ಮುಂಬಡ್ತಿ ನೀಡಬೇಕು ಎಂದು ಆಗ್ರಹಿಸಿ ಕಿರಿಯ ಅರಣ್ಯ ರಕ್ಷಕರು ಕೆಲಸಕ್ಕೆ ಹಾಜರಾಗದೆ ಇಲ್ಲಿನ ಅರಣ್ಯ ಇಲಾಖೆ ಕಚೇರಿಯ ಕಾರಿಡಾರ್ನಲ್ಲಿ ಪೆಟ್ರೋಲ್ ಮತ್ತು ವಿಷದ ಬಾಟಲಿ ಇಟ್ಟುಕೊಂಡು ಮಂಗಳವಾರ ಧರಣಿ ನಡೆಸಿದರು.</p>.<p>‘ಬೇರೆ ವೃತ್ತದವರು ಉಪ ವಲಯ ಅರಣ್ಯಾಧಿಕಾರಿಗಳಾಗಿ ನಮ್ಮ ಮೇಲೆ ಅಧಿಕಾರ ಚಲಾಯಿಸುತ್ತಿದ್ದಾರೆ. ಇದರಿಂದ ನಮಗೆ ಅನ್ಯಾಯವಾಗುತ್ತಿದೆ. ಮಾನಸಿಕ ವೇದನೆ ಅನುಭವಿಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಬಹುತೇಕ ವೃತ್ತಗಳಲ್ಲಿ ನೇಮಕವಾದ ಒಂದೇ ವರ್ಷದಲ್ಲಿ ಬಡ್ತಿ ಹೊಂದಿ ಉಪವಲಯ ಅರಣ್ಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ನಾವಿನ್ನೂ ರಕ್ಷಕರಾಗಿಯೇ ಉಳಿದಿದ್ದೇವೆ’ ಎಂದು ಅಳಲು ತೋಡಿಕೊಂಡರು</p>.<p>‘ಈ ಬಗ್ಗೆ ಮನವಿ ಸಲ್ಲಿಸಿದ್ದರೂ, ಹೋರಾಟ ನಡೆಸಿದ್ದರೂ ಸ್ಪಂದನೆ ಸಿಗದಿರುವುದು ನೋವು ತಂದಿದೆ. ನ್ಯಾಯ ಸಿಗುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು’ ಎಂದು ತಿಳಿಸಿದರು.</p>.<p>ಮನವಿ ಸ್ವೀಕರಿಸಿದ ಅಧಿಕಾರಿಗಳು, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಬೇರೆ ವೃತ್ತಗಳಂತೆ ತಮಗೂ ಮುಂಬಡ್ತಿ ನೀಡಬೇಕು ಎಂದು ಆಗ್ರಹಿಸಿ ಕಿರಿಯ ಅರಣ್ಯ ರಕ್ಷಕರು ಕೆಲಸಕ್ಕೆ ಹಾಜರಾಗದೆ ಇಲ್ಲಿನ ಅರಣ್ಯ ಇಲಾಖೆ ಕಚೇರಿಯ ಕಾರಿಡಾರ್ನಲ್ಲಿ ಪೆಟ್ರೋಲ್ ಮತ್ತು ವಿಷದ ಬಾಟಲಿ ಇಟ್ಟುಕೊಂಡು ಮಂಗಳವಾರ ಧರಣಿ ನಡೆಸಿದರು.</p>.<p>‘ಬೇರೆ ವೃತ್ತದವರು ಉಪ ವಲಯ ಅರಣ್ಯಾಧಿಕಾರಿಗಳಾಗಿ ನಮ್ಮ ಮೇಲೆ ಅಧಿಕಾರ ಚಲಾಯಿಸುತ್ತಿದ್ದಾರೆ. ಇದರಿಂದ ನಮಗೆ ಅನ್ಯಾಯವಾಗುತ್ತಿದೆ. ಮಾನಸಿಕ ವೇದನೆ ಅನುಭವಿಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಬಹುತೇಕ ವೃತ್ತಗಳಲ್ಲಿ ನೇಮಕವಾದ ಒಂದೇ ವರ್ಷದಲ್ಲಿ ಬಡ್ತಿ ಹೊಂದಿ ಉಪವಲಯ ಅರಣ್ಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ನಾವಿನ್ನೂ ರಕ್ಷಕರಾಗಿಯೇ ಉಳಿದಿದ್ದೇವೆ’ ಎಂದು ಅಳಲು ತೋಡಿಕೊಂಡರು</p>.<p>‘ಈ ಬಗ್ಗೆ ಮನವಿ ಸಲ್ಲಿಸಿದ್ದರೂ, ಹೋರಾಟ ನಡೆಸಿದ್ದರೂ ಸ್ಪಂದನೆ ಸಿಗದಿರುವುದು ನೋವು ತಂದಿದೆ. ನ್ಯಾಯ ಸಿಗುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು’ ಎಂದು ತಿಳಿಸಿದರು.</p>.<p>ಮನವಿ ಸ್ವೀಕರಿಸಿದ ಅಧಿಕಾರಿಗಳು, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>