ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹದ್ದು ಮೀರಿದ ವರ್ತನೆ ಸಹಿಸಲು ಸಾಧ್ಯವಿಲ್ಲ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

Last Updated 18 ಡಿಸೆಂಬರ್ 2021, 8:30 IST
ಅಕ್ಷರ ಗಾತ್ರ

ಮೈಸೂರು: 'ಬೆಳಗಾವಿಯಲ್ಲಿ ನಡೆದ ಪುಂಡಾಟ ಖಂಡನೀಯ. ಹದ್ದು ಮೀರಿದ ವರ್ತನೆ ಸಹಿಸಲು ಸಾಧ್ಯವಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಲ್ಲಿ ತಿಳಿಸಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ವರ್ತನೆ ಅಕ್ಷಮ್ಯ ಅಪರಾಧ. ಇತಿಹಾಸ ಪುರುಷರ ಪ್ರತಿಮೆಗಳಿಗೆ ಧಕ್ಕೆ ಉಂಟುಮಾಡಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಅಧಿವೇಶನದಲ್ಲೂ ಚರ್ಚಿಸಲಾಗುವುದು. ಪುಂಡಾಟಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಕೂಡ ಹೇಳಿದ್ದಾರೆ ಎಂದರು.

ಇಂಥ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಪುಂಡಾಟಿಕೆ ನಡೆಸಿದವರು ಯಾರೇ ಇರಲಿ; ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT