ಬೆಳಗಾವಿ: ಜೈಲಿನಲ್ಲಿ ಕಣ್ಣೀರಿಟ್ಟ ಮಾಜಿ ಸಚಿವ ವಿನಯ ಕುಲಕರ್ಣಿ

ಬೆಳಗಾವಿ: ಹುಟ್ಟುಹಬ್ಬ ಆಚರಿಸಿಕೊಳ್ಳಲಾಗದೆ ಅಸಹಾಯಕರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಇಲ್ಲಿನ ಹಿಂಡಲಗಾ ಜೈಲಿನಲ್ಲಿ ಕಣ್ಣೀರಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕುಟುಂಬದವರೊಂದಿಗೆ ಮಾತನಾಡಲು ಅವಕಾಶ ದೊರೆಯದಿರುವುದಕ್ಕೆ ಬೇಸರ ಮಾಡಿಕೊಂಡಿದ್ದರು.
ಕುಟುಂಬದವರೊಂದಿಗೆ ಮಾತನಾಡಲು ಅವಕಾಶ ನೀಡುವಂತೆ, ವಿಚಾರಣೆಗಾಗಿ ತಮ್ಮನ್ನು ವಶಕ್ಕೆ ಪಡೆಯಲು ಬಂದ ಸಿಬಿಐ ಅಧಿಕಾರಿಗಳ ಮುಂದೆ ಮನವಿ ಮಾಡಿಕೊಂಡರು. ಆದರೆ ಅದಕ್ಕೆ ಅವಕಾಶ ಕೊಡಲಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ.
ಇದನ್ನೂ ಓದಿ: ಬೆಳಗಾವಿ: ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು
ಹುಟ್ಟುಹಬ್ಬದ ಕಾರಣದಿಂದ ಅಭಿಮಾನಿಗಳು ಬರುತ್ತಾರೆಂಬ ಸಾಧ್ಯತೆ ಇದ್ದಿದ್ದರಿಂದ ಜೈಲಿನ ಆವರಣದಲ್ಲಿ ಭದ್ರತೆ ಮಾಡಲಾಗಿತ್ತು. ಆದರೆ, ಅಭಿಮಾನಿಗಳಾಗಲಿ, ಪಕ್ಷದ ಕಾರ್ಯಕರ್ತರಾಗಲಿ ಬಂದಿರಲಿಲ್ಲ.
ಇನ್ನಷ್ಟು...
ಯೋಗೀಶಗೌಡ ಗೌಡರ ಕೊಲೆ ಪ್ರಕರಣ: ವಿನಯ ಕುಲಕರ್ಣಿ ಸಿಬಿಐ ವಶಕ್ಕೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.