ಬೆಳಗಾವಿ: ಹುಟ್ಟುಹಬ್ಬ ಆಚರಿಸಿಕೊಳ್ಳಲಾಗದೆ ಅಸಹಾಯಕರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಇಲ್ಲಿನ ಹಿಂಡಲಗಾ ಜೈಲಿನಲ್ಲಿ ಕಣ್ಣೀರಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕುಟುಂಬದವರೊಂದಿಗೆ ಮಾತನಾಡಲು ಅವಕಾಶ ದೊರೆಯದಿರುವುದಕ್ಕೆ ಬೇಸರ ಮಾಡಿಕೊಂಡಿದ್ದರು. ಕುಟುಂಬದವರೊಂದಿಗೆ ಮಾತನಾಡಲು ಅವಕಾಶ ನೀಡುವಂತೆ, ವಿಚಾರಣೆಗಾಗಿ ತಮ್ಮನ್ನು ವಶಕ್ಕೆ ಪಡೆಯಲು ಬಂದ ಸಿಬಿಐ ಅಧಿಕಾರಿಗಳ ಮುಂದೆ ಮನವಿ ಮಾಡಿಕೊಂಡರು. ಆದರೆ ಅದಕ್ಕೆ ಅವಕಾಶ ಕೊಡಲಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ.
ಹುಟ್ಟುಹಬ್ಬದ ಕಾರಣದಿಂದ ಅಭಿಮಾನಿಗಳು ಬರುತ್ತಾರೆಂಬ ಸಾಧ್ಯತೆ ಇದ್ದಿದ್ದರಿಂದ ಜೈಲಿನ ಆವರಣದಲ್ಲಿ ಭದ್ರತೆ ಮಾಡಲಾಗಿತ್ತು. ಆದರೆ, ಅಭಿಮಾನಿಗಳಾಗಲಿ, ಪಕ್ಷದ ಕಾರ್ಯಕರ್ತರಾಗಲಿ ಬಂದಿರಲಿಲ್ಲ.