<p><strong>ಬೆಳಗಾವಿ:</strong> ತಾಲ್ಲೂಕಿನಲ್ಲಿ ಶನಿವಾರ ತಡರಾತ್ರಿ ನಡೆದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತರಾದರು.</p>.<p>ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಬರ್ಡೇ ಹೋಟೆಲ್ ಸಮೀಪ ಶನಿವಾರ ತಡರಾತ್ರಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟರು.</p>.<p>ತಾಲ್ಲೂಕಿನ ಕೇದನೂರ ಗ್ರಾಮದ ಸಂಜು ರಾಜಾಯಿ (29), ಪ್ರಕಾಶ ಚಂಡಕೆ (27) ಅಡಿವೆಪ್ಪ ಗುಜ್ಜನವರ (29) ಮೃತರು. ಅವರು ಖಾನಾಪುರ ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಕೂಲಿ ಕೆಲಸಕ್ಕೆ ಹೋಗಿ ವಾಪಸಾಗುತ್ತಿದ್ದರು.</p>.<p>ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead"><strong>ಊಟಕ್ಕೆ ಹೋಗುವಾಗ ಅಪಘಾತ</strong></p>.<p>ದ್ವಿಚಕ್ರವಾಹನದಲ್ಲಿ ಹೊನಗಾದ ದಾಭಾಗೆ ಶನಿವಾರ ತಡರಾತ್ರಿ ಊಟಕ್ಕೆಂದು ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿಒಬ್ಬ ವಿದ್ಯಾರ್ಥಿ ಮೃತಪಟ್ಟು, ಇನ್ನೊಬ್ಬರು ಗಾಯಗೊಂಡಿದ್ದಾರೆ.</p>.<p>ಗೋಕಾಕ ತಾಲ್ಲೂಕಿನ ಘಟಪ್ರಭಾ ಬಳಿಯ ಧೂಪದಾಳದ ಅಕ್ಷಯ ಹುಂಡೇಕರ (23) ಮೃತ. ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಸಮೀಪದ ಕೇಸ್ತಿ ನಿವಾಸಿ ಸಚಿನ ಕುಲಕರ್ಣಿ (23) ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಇಬ್ಬರೂ ಖಾಸಗಿ ಕಾಲೇಜಿನಲ್ಲಿ ಎಂಬಿಒ ವಿದ್ಯಾರ್ಥಿಗಳು. ಕಾಕತಿ ಠಾಣೆ ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ಸ್ಥಳಕ್ಕೆ ಭೇಟಿ ನೀಡಿದ್ದರು. ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನಲ್ಲಿ ಶನಿವಾರ ತಡರಾತ್ರಿ ನಡೆದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತರಾದರು.</p>.<p>ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಬರ್ಡೇ ಹೋಟೆಲ್ ಸಮೀಪ ಶನಿವಾರ ತಡರಾತ್ರಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟರು.</p>.<p>ತಾಲ್ಲೂಕಿನ ಕೇದನೂರ ಗ್ರಾಮದ ಸಂಜು ರಾಜಾಯಿ (29), ಪ್ರಕಾಶ ಚಂಡಕೆ (27) ಅಡಿವೆಪ್ಪ ಗುಜ್ಜನವರ (29) ಮೃತರು. ಅವರು ಖಾನಾಪುರ ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಕೂಲಿ ಕೆಲಸಕ್ಕೆ ಹೋಗಿ ವಾಪಸಾಗುತ್ತಿದ್ದರು.</p>.<p>ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead"><strong>ಊಟಕ್ಕೆ ಹೋಗುವಾಗ ಅಪಘಾತ</strong></p>.<p>ದ್ವಿಚಕ್ರವಾಹನದಲ್ಲಿ ಹೊನಗಾದ ದಾಭಾಗೆ ಶನಿವಾರ ತಡರಾತ್ರಿ ಊಟಕ್ಕೆಂದು ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿಒಬ್ಬ ವಿದ್ಯಾರ್ಥಿ ಮೃತಪಟ್ಟು, ಇನ್ನೊಬ್ಬರು ಗಾಯಗೊಂಡಿದ್ದಾರೆ.</p>.<p>ಗೋಕಾಕ ತಾಲ್ಲೂಕಿನ ಘಟಪ್ರಭಾ ಬಳಿಯ ಧೂಪದಾಳದ ಅಕ್ಷಯ ಹುಂಡೇಕರ (23) ಮೃತ. ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಸಮೀಪದ ಕೇಸ್ತಿ ನಿವಾಸಿ ಸಚಿನ ಕುಲಕರ್ಣಿ (23) ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಇಬ್ಬರೂ ಖಾಸಗಿ ಕಾಲೇಜಿನಲ್ಲಿ ಎಂಬಿಒ ವಿದ್ಯಾರ್ಥಿಗಳು. ಕಾಕತಿ ಠಾಣೆ ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ಸ್ಥಳಕ್ಕೆ ಭೇಟಿ ನೀಡಿದ್ದರು. ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>