<p><strong>ಬೆಳಗಾವಿ: </strong>ಜಿಲ್ಲೆಯ ಸವದತ್ತಿ ತಾಲ್ಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ, ರಾಜ್ಯ ಹೆದ್ದಾರಿ ಮೇಲೆ ಭಾನುವಾರ ಮಧ್ಯಾಹ್ನ ಲಾರಿ, ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಎಎಸ್ಐ ಕುಟುಂಬದ ಇಬ್ಬರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.</p>.<p>ಕುಡಚಿ ಎಎಸ್ಐ ಪರಶುರಾಮ ಹಲಕಿ ಅವರ ಪತ್ನಿ ರುಕ್ಮಿಣಿ ಹಲಕಿ (48), ಪುತ್ರಿ ಅಕ್ಷತಾ (22) ಕಾರ್ ಚಾಲಕ ನಿಖಿಲ್ ಕದಂ (24) ಸ್ಥಳದಲ್ಲೇ ಸಾವನ್ನಪ್ಪಿದರು. ಹಣಮವ್ವ ಚಿಪ್ಪಲಕಟ್ಟಿ ಎನ್ನುವವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.</p>.<p>ಎಎಸ್ಐ ಪರಶುರಾಮ ಅವರು ವಾಹನದಲ್ಲಿ ಇರಲಿಲ್ಲ. ಅವರ ಪತ್ನಿ, ಪುತ್ರಿ ಕಾರಿನಲ್ಲಿ ಯರಗಟ್ಟಿ ಕಡೆಗೆ ಹೊರಟಿದ್ದರು. ಇದೇ ವೇಳೆ ಯರಗಟ್ಟಿ ಕಡೆಯಿಂದ ಬೆಳಗಾವಿ ಮಾರ್ಗವಾಗಿ ಸಂಚರಿಸುತ್ತಿದ್ದ ಸಿಮೆಂಟ್ ತುಂಬಿದ್ದ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿತು. ಕಾರಿನ ಹಿಂದೆಯೇ ಹೊರಟಿದ್ದ ಬೈಕ್ ಸವಾರರಿಗೂ ಈ ವಾಹನಗಳು ಗುದ್ದಿದವು. ಅಪಘಾತದ ರಭಸಕ್ಕೆ ಕಾರ್, ಬೈಕ್ ಸಂಪೂರ್ಣ ನಜ್ಜುಗುಜ್ಜಾದವು.</p>.<p>ರುಕ್ಮಿಣಿ, ಅಕ್ಷತಾ ಹಾಗೂ ನಿಖಿಲ್ ಸ್ಥಳದಲ್ಲೇ ಕೊನೆಯುಸಿರೆಳೆದರು. ಬೈಕಿನಲ್ಲೂ ಮೂವರು ಸಂಚರಿಸುತ್ತಿದ್ದರು. ಅವರಲ್ಲಿ ಹಣಮವ್ವ ಎನ್ನುವ ವೃದ್ಧೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬೈಕ್ ಸವಾರ ಹಾಗೂ ಹಿಂಬದಿಯಲ್ಲಿ ಕುಳತವರು ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ನಗರದ ಆಸ್ಪತ್ರೆಗೆ ಸಾಗಿಸಲಾಗಿದೆ.</p>.<p>ಲಾರಿ ಅಡಿಗೆ ಸಿಲುಕಿದ ಕಾರಿನಲ್ಲಿದ್ದ ದೇಹಗಳನ್ನು ತೆಗೆಯಲು ಸಾಕಷ್ಟು ಸಂಕಷ್ಟ ಪಡಬೇಕಾಯಿತು.</p>.<p><strong>ಸಂಚಾರ ವ್ಯತ್ಯಯ:</strong>ಸರಣಿ ಅಪಘಾತದಿಂದಾಗಿ ಬಾಚಿ– ರಾಯಚೂರು ರಾಜ್ಯ ಹೆದ್ದಾರಿ ಸಂಚಾರ ಬಂದ್ ಆಯಿತು. ಎರಡು ತಾಸಿನ ನಂತರ ಪೊಲೀಸರು ವಾಹನಗಳನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಭಾಯಿಸಿದರು.</p>.<p>ಮುರಗೋಡ, ನೇಸರಗಿ, ಯರಗಟ್ಟಿ ಠಾಣೆಗಳ ಪೊಲೀಸರು ಕೂಡ ಸ್ಥಳಕ್ಕೆ ಬಂದರು. ಈ ಬಗ್ಗೆ ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಜಿಲ್ಲೆಯ ಸವದತ್ತಿ ತಾಲ್ಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ, ರಾಜ್ಯ ಹೆದ್ದಾರಿ ಮೇಲೆ ಭಾನುವಾರ ಮಧ್ಯಾಹ್ನ ಲಾರಿ, ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಎಎಸ್ಐ ಕುಟುಂಬದ ಇಬ್ಬರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.</p>.<p>ಕುಡಚಿ ಎಎಸ್ಐ ಪರಶುರಾಮ ಹಲಕಿ ಅವರ ಪತ್ನಿ ರುಕ್ಮಿಣಿ ಹಲಕಿ (48), ಪುತ್ರಿ ಅಕ್ಷತಾ (22) ಕಾರ್ ಚಾಲಕ ನಿಖಿಲ್ ಕದಂ (24) ಸ್ಥಳದಲ್ಲೇ ಸಾವನ್ನಪ್ಪಿದರು. ಹಣಮವ್ವ ಚಿಪ್ಪಲಕಟ್ಟಿ ಎನ್ನುವವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.</p>.<p>ಎಎಸ್ಐ ಪರಶುರಾಮ ಅವರು ವಾಹನದಲ್ಲಿ ಇರಲಿಲ್ಲ. ಅವರ ಪತ್ನಿ, ಪುತ್ರಿ ಕಾರಿನಲ್ಲಿ ಯರಗಟ್ಟಿ ಕಡೆಗೆ ಹೊರಟಿದ್ದರು. ಇದೇ ವೇಳೆ ಯರಗಟ್ಟಿ ಕಡೆಯಿಂದ ಬೆಳಗಾವಿ ಮಾರ್ಗವಾಗಿ ಸಂಚರಿಸುತ್ತಿದ್ದ ಸಿಮೆಂಟ್ ತುಂಬಿದ್ದ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿತು. ಕಾರಿನ ಹಿಂದೆಯೇ ಹೊರಟಿದ್ದ ಬೈಕ್ ಸವಾರರಿಗೂ ಈ ವಾಹನಗಳು ಗುದ್ದಿದವು. ಅಪಘಾತದ ರಭಸಕ್ಕೆ ಕಾರ್, ಬೈಕ್ ಸಂಪೂರ್ಣ ನಜ್ಜುಗುಜ್ಜಾದವು.</p>.<p>ರುಕ್ಮಿಣಿ, ಅಕ್ಷತಾ ಹಾಗೂ ನಿಖಿಲ್ ಸ್ಥಳದಲ್ಲೇ ಕೊನೆಯುಸಿರೆಳೆದರು. ಬೈಕಿನಲ್ಲೂ ಮೂವರು ಸಂಚರಿಸುತ್ತಿದ್ದರು. ಅವರಲ್ಲಿ ಹಣಮವ್ವ ಎನ್ನುವ ವೃದ್ಧೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬೈಕ್ ಸವಾರ ಹಾಗೂ ಹಿಂಬದಿಯಲ್ಲಿ ಕುಳತವರು ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ನಗರದ ಆಸ್ಪತ್ರೆಗೆ ಸಾಗಿಸಲಾಗಿದೆ.</p>.<p>ಲಾರಿ ಅಡಿಗೆ ಸಿಲುಕಿದ ಕಾರಿನಲ್ಲಿದ್ದ ದೇಹಗಳನ್ನು ತೆಗೆಯಲು ಸಾಕಷ್ಟು ಸಂಕಷ್ಟ ಪಡಬೇಕಾಯಿತು.</p>.<p><strong>ಸಂಚಾರ ವ್ಯತ್ಯಯ:</strong>ಸರಣಿ ಅಪಘಾತದಿಂದಾಗಿ ಬಾಚಿ– ರಾಯಚೂರು ರಾಜ್ಯ ಹೆದ್ದಾರಿ ಸಂಚಾರ ಬಂದ್ ಆಯಿತು. ಎರಡು ತಾಸಿನ ನಂತರ ಪೊಲೀಸರು ವಾಹನಗಳನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಭಾಯಿಸಿದರು.</p>.<p>ಮುರಗೋಡ, ನೇಸರಗಿ, ಯರಗಟ್ಟಿ ಠಾಣೆಗಳ ಪೊಲೀಸರು ಕೂಡ ಸ್ಥಳಕ್ಕೆ ಬಂದರು. ಈ ಬಗ್ಗೆ ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>