ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಬಟ್ಟೆ ತೊಳೆಯಲು ಹೋಗಿ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ ನಾಲ್ವರು

Last Updated 28 ಜೂನ್ 2021, 11:20 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಹಲ್ಯಾಳ ಬಳಿ ಕೃಷ್ಣಾ ನದಿಯಲ್ಲಿ ನಾಲ್ವರು ಕೊಚ್ಚಿ ಹೋಗಿರುವ ಘಟನೆ ಸೋಮವಾರ ನಡೆದಿದೆ.

ಅವರನ್ನು ಗೋಪಾಲ ಬನಸುಡೆ (36), ಸದಾಶಿವ ಬನಸುಡೆ (24), ಶಂಕರ ಬನಸುಡೆ (20) ಹಾಗೂ ಧರೆಪ್ಪ ಬನಸುಡೆ (22) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಹೋದರರು ಎಂದು ತಿಳಿದುಬಂದಿದೆ. ಅವರು ಗ್ರಾಮದಲ್ಲಿನ ಜಾತ್ರೆ ಹಿನ್ನೆಲೆಯಲ್ಲಿ ಬಟ್ಟೆಗಳು, ಹೊದಿಕೆ ಮೊದಲಾದವುಗಳನ್ನು ತೊಳೆಯುವುದಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

ನಾಲ್ವರು ಕೊಚ್ಚಿ ಹೋಗಿರುವುದನ್ನು ಖಚಿತಪಡಿಸಿದ ಎಸ್ಪಿ ಲಕ್ಷ್ಮಣ ನಿಂಬರಗಿ, ‘ಅಥಣಿ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳೀಯ ಈಜುಗಾರರ ಸಹಾಯದೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಚಿಕ್ಕೋಡಿಯ ಯಡೂರದಲ್ಲಿ ಬೀಡು ಬಿಟ್ಟಿರುವ ಎನ್‌ಡಿಆರ್‌ಎಫ್‌ ತಂಡವೂ ಧಾವಿಸಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT