ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಘಟಪ್ರಭಾ ಜಲಾಶಯದಲ್ಲಿ ಈಜಲು ಹೋಗಿದ್ದ ನಾಲ್ವರು ಯುವಕರ ಸಾವು

Last Updated 14 ಏಪ್ರಿಲ್ 2023, 12:41 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಗೋಕಾಕ ತಾಲ್ಲೂಕಿನ ಘಟಪ್ರಭಾ ಸಮೀಪದ ಧುಪದಾಳ ಜಲಾಶಯದಲ್ಲಿ ನೀರಿಗೆ ಇಳಿದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಒಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂತೋಷ್ ಬಾಬು ಈಡಗ (19), ಅಜಯ ಬಾಬು ಜೋರೆ (19), ಕೃಷ್ಣ ಬಾಬು ಜೋರೆ (20), ಆನಂದ ವಿಟ್ಟು ಕೋಕಡೆ (20) ಮೃತರು. ರಾಮಚಂದ್ರ ಕೋಕಡೆ ಗಂಭೀರ (20) ಸ್ಥಿತಿ ಚಿಂತಾಜನಕವಾಗಿದೆ. ವಿಠ್ಠಲ್ ಜಾನು ಕೋಕಡೆ (20) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಎಲ್ಲರೂ ಉತ್ತರಕನ್ನಡ ಜಿಲ್ಲೆಯ ಸಮೀಪದ ಮುಂಡಗೋಡ ತಾಲ್ಲೂಕಿನ ಸಿರಿಗೆರೆ ಗ್ರಾಮದವರು. ಘಟಪ್ರಭಾದ ಬಾರೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಶುಕ್ರವಾರ ರಜೆ ಇದ್ದ ಕಾರಣ ಪ್ರವಾಸಕ್ಕೆ ಹೋಗಿದ್ದರು ಎನ್ನಲಾಗಿದೆ.

ಎಲ್ಲರಿಗೂ ಈಜು ಬರುತ್ತಿದ್ದ ಕಾರಣ ಜಲಾಶಯಕ್ಕೆ ಇಳಿದರು. ಈಜುವಾಗಲೇ ಕೆಸರಿನಲ್ಲಿ ಸಿಲುಕಿ ಮೃತಪಟ್ಟರು ಎಂದು ಸ್ಥಳದಲ್ಲಿದ್ದವರು ಮಾಹಿತಿ ನೀಡಿದ್ದಾರೆ.

ಎಲ್ಲರನ್ನೂ ಘಟಪ್ರಭಾ ಕೆಎಚ್ಐ ಆಸ್ಪತ್ರೆಯಲ್ಲಿ ಇಡಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT