<p><strong>ಬೆಳಗಾವಿ: </strong>ಜಿಲ್ಲೆಯ ಗೋಕಾಕ ತಾಲ್ಲೂಕಿನ ಘಟಪ್ರಭಾ ಸಮೀಪದ ಧುಪದಾಳ ಜಲಾಶಯದಲ್ಲಿ ನೀರಿಗೆ ಇಳಿದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಒಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಸಂತೋಷ್ ಬಾಬು ಈಡಗ (19), ಅಜಯ ಬಾಬು ಜೋರೆ (19), ಕೃಷ್ಣ ಬಾಬು ಜೋರೆ (20), ಆನಂದ ವಿಟ್ಟು ಕೋಕಡೆ (20) ಮೃತರು. ರಾಮಚಂದ್ರ ಕೋಕಡೆ ಗಂಭೀರ (20) ಸ್ಥಿತಿ ಚಿಂತಾಜನಕವಾಗಿದೆ. ವಿಠ್ಠಲ್ ಜಾನು ಕೋಕಡೆ (20) ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಎಲ್ಲರೂ ಉತ್ತರಕನ್ನಡ ಜಿಲ್ಲೆಯ ಸಮೀಪದ ಮುಂಡಗೋಡ ತಾಲ್ಲೂಕಿನ ಸಿರಿಗೆರೆ ಗ್ರಾಮದವರು. ಘಟಪ್ರಭಾದ ಬಾರೊಂದರಲ್ಲಿ ಕೆಲಸ ಮಾಡುತ್ತಿದ್ದರು.</p>.<p>ಶುಕ್ರವಾರ ರಜೆ ಇದ್ದ ಕಾರಣ ಪ್ರವಾಸಕ್ಕೆ ಹೋಗಿದ್ದರು ಎನ್ನಲಾಗಿದೆ.</p>.<p>ಎಲ್ಲರಿಗೂ ಈಜು ಬರುತ್ತಿದ್ದ ಕಾರಣ ಜಲಾಶಯಕ್ಕೆ ಇಳಿದರು. ಈಜುವಾಗಲೇ ಕೆಸರಿನಲ್ಲಿ ಸಿಲುಕಿ ಮೃತಪಟ್ಟರು ಎಂದು ಸ್ಥಳದಲ್ಲಿದ್ದವರು ಮಾಹಿತಿ ನೀಡಿದ್ದಾರೆ.</p>.<p>ಎಲ್ಲರನ್ನೂ ಘಟಪ್ರಭಾ ಕೆಎಚ್ಐ ಆಸ್ಪತ್ರೆಯಲ್ಲಿ ಇಡಲಾಗಿದೆ.</p>.<p><strong>ಇವನ್ನೂ ಓದಿ... </strong></p>.<p><a href="https://www.prajavani.net/district/tumakuru/five-people-die-due-to-bus-collides-with-car-at-tumkur-1031618.html" target="_blank"><strong>ತುಮಕೂರು: ಕಾರಿಗೆ ಬಸ್ ಡಿಕ್ಕಿ, ಬೆಂಗಳೂರಿನ ವಿಜಯನಗರದ ಐವರು ಸ್ಥಳದಲ್ಲೇ ಸಾವು</strong></a></p>.<p><strong><a href="https://www.prajavani.net/district/udupi/ksrtc-bus-and-car-collision-at-sampaje-many-killed-on-the-spot-1031590.html" target="_blank">ಕೊಡಗು: ಸಂಪಾಜೆ ಸಮೀಪ ಕೆಎಸ್ಆರ್ಟಿಸಿ ಬಸ್ –ಕಾರು ಡಿಕ್ಕಿ, ಆರು ಮಂದಿ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಜಿಲ್ಲೆಯ ಗೋಕಾಕ ತಾಲ್ಲೂಕಿನ ಘಟಪ್ರಭಾ ಸಮೀಪದ ಧುಪದಾಳ ಜಲಾಶಯದಲ್ಲಿ ನೀರಿಗೆ ಇಳಿದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಒಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಸಂತೋಷ್ ಬಾಬು ಈಡಗ (19), ಅಜಯ ಬಾಬು ಜೋರೆ (19), ಕೃಷ್ಣ ಬಾಬು ಜೋರೆ (20), ಆನಂದ ವಿಟ್ಟು ಕೋಕಡೆ (20) ಮೃತರು. ರಾಮಚಂದ್ರ ಕೋಕಡೆ ಗಂಭೀರ (20) ಸ್ಥಿತಿ ಚಿಂತಾಜನಕವಾಗಿದೆ. ವಿಠ್ಠಲ್ ಜಾನು ಕೋಕಡೆ (20) ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಎಲ್ಲರೂ ಉತ್ತರಕನ್ನಡ ಜಿಲ್ಲೆಯ ಸಮೀಪದ ಮುಂಡಗೋಡ ತಾಲ್ಲೂಕಿನ ಸಿರಿಗೆರೆ ಗ್ರಾಮದವರು. ಘಟಪ್ರಭಾದ ಬಾರೊಂದರಲ್ಲಿ ಕೆಲಸ ಮಾಡುತ್ತಿದ್ದರು.</p>.<p>ಶುಕ್ರವಾರ ರಜೆ ಇದ್ದ ಕಾರಣ ಪ್ರವಾಸಕ್ಕೆ ಹೋಗಿದ್ದರು ಎನ್ನಲಾಗಿದೆ.</p>.<p>ಎಲ್ಲರಿಗೂ ಈಜು ಬರುತ್ತಿದ್ದ ಕಾರಣ ಜಲಾಶಯಕ್ಕೆ ಇಳಿದರು. ಈಜುವಾಗಲೇ ಕೆಸರಿನಲ್ಲಿ ಸಿಲುಕಿ ಮೃತಪಟ್ಟರು ಎಂದು ಸ್ಥಳದಲ್ಲಿದ್ದವರು ಮಾಹಿತಿ ನೀಡಿದ್ದಾರೆ.</p>.<p>ಎಲ್ಲರನ್ನೂ ಘಟಪ್ರಭಾ ಕೆಎಚ್ಐ ಆಸ್ಪತ್ರೆಯಲ್ಲಿ ಇಡಲಾಗಿದೆ.</p>.<p><strong>ಇವನ್ನೂ ಓದಿ... </strong></p>.<p><a href="https://www.prajavani.net/district/tumakuru/five-people-die-due-to-bus-collides-with-car-at-tumkur-1031618.html" target="_blank"><strong>ತುಮಕೂರು: ಕಾರಿಗೆ ಬಸ್ ಡಿಕ್ಕಿ, ಬೆಂಗಳೂರಿನ ವಿಜಯನಗರದ ಐವರು ಸ್ಥಳದಲ್ಲೇ ಸಾವು</strong></a></p>.<p><strong><a href="https://www.prajavani.net/district/udupi/ksrtc-bus-and-car-collision-at-sampaje-many-killed-on-the-spot-1031590.html" target="_blank">ಕೊಡಗು: ಸಂಪಾಜೆ ಸಮೀಪ ಕೆಎಸ್ಆರ್ಟಿಸಿ ಬಸ್ –ಕಾರು ಡಿಕ್ಕಿ, ಆರು ಮಂದಿ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>