ತೆಲಸಂಗ: ‘ರೋಗ ಬಂದ ಮೇಲೆ ನರಳುವ ಮುನ್ನ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಮತ್ತು ಎಚ್ಚರ ವಹಿಸುವುದು ಇಂದಿನ ಅಗತ್ಯವಾಗಿದೆ’ ಎಂದು ಹೊನವಾಡದ ಬಾಬುರಾವ ಮಹಾರಾಜರು ಹೇಳಿದರು.
ಸಮೀಪದ ಕನ್ನಾಳ ಗ್ರಾಮದಲ್ಲಿ ಆಯುರ್ವೇದ ಔಷಧಿ ಉಚಿತವಾಗಿ ವಿತರಿಸಿ ಅವರು ಮಾತನಾಡಿದರು.
‘ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಸೋಂಕುಗಳಿಂದ ದೂರವಾಗಲು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.