<p><strong>ಅಥಣಿ:</strong> ‘ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ. ವಿದ್ಯಾರ್ಥಿಗಳು ಭವಿಷ್ಯವನ್ನು ಉತ್ತಮವಾಗಿ ರೂಪಿಸುವಂತಹ ಸಮಯವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕಾಡಸಿದ್ದೇಶ್ವರ ಆಶ್ರಮದ ಕಾಡಯ್ಯ ಸ್ವಾಮೀಜಿ ಸಲಹೆ ನೀಡಿದರು.</p>.<p>ಇಲ್ಲಿನ ಹುದ್ದಾರ ಶಿಕ್ಷಣ ಸಂಸ್ಥೆ ಹಾಗೂ ಕೊಕಟನೂರದ ಕಲ್ಪವೃಕ್ಷ ಶಿಕ್ಷಣ ಸಂಸ್ಥೆ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಹಮ್ಮಿಕೊಂಡಿರುವ ಆನ್ಲೈನ್ ತರಬೇತಿ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಕೊರೊನಾ ವೈರಾಣು ಹರಡುವ ಭೀತಿಯಿಂದಾಗಿ ಲಾಕ್ಡೌನ್ ಘೋಷಿಸಲಾಗಿದೆ. ಹೀಗಾಗಿ, ವಿದ್ಯಾರ್ಥಿಗಳಿಗೆ ಉಚಿತವಾಗಿ ಆನ್ಲೈನ್ ತರಬೇತಿ ನೀಡುತ್ತಿರುವುದು ಒಳ್ಳೆಯದು’ ಎಂದರು.</p>.<p>ಹುದ್ದಾರ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿಜಯ ಹುದಾರ, ‘ನಾವು ಉಚಿತವಾಗಿ ತರಬೇತಿ ನೀಡುತ್ತಿದ್ದೇವೆ. ರಾಜ್ಯದ ಯಾವುದೇ ವಿದ್ಯಾರ್ಥಿ ಬೇಕಾದರೂ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಮೊ: 9902995519 ಸಂಪರ್ಕಿಸಬಹುದು’ ಎಂದು ತಿಳಿಸಿದರು.</p>.<p>ಅನಂತರಾವ ಜೋಶಿ, ಸಂಜಯ ಕುಲಕರ್ಣಿ, ಆರ್.ಪಿ. ಹೊನಗೌಡರ, ಶಿವಾನಂದ ಕಾಂಬಳೆ, ಪೂರ್ಣಿಮಾ ಹುದ್ದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ‘ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ. ವಿದ್ಯಾರ್ಥಿಗಳು ಭವಿಷ್ಯವನ್ನು ಉತ್ತಮವಾಗಿ ರೂಪಿಸುವಂತಹ ಸಮಯವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕಾಡಸಿದ್ದೇಶ್ವರ ಆಶ್ರಮದ ಕಾಡಯ್ಯ ಸ್ವಾಮೀಜಿ ಸಲಹೆ ನೀಡಿದರು.</p>.<p>ಇಲ್ಲಿನ ಹುದ್ದಾರ ಶಿಕ್ಷಣ ಸಂಸ್ಥೆ ಹಾಗೂ ಕೊಕಟನೂರದ ಕಲ್ಪವೃಕ್ಷ ಶಿಕ್ಷಣ ಸಂಸ್ಥೆ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಹಮ್ಮಿಕೊಂಡಿರುವ ಆನ್ಲೈನ್ ತರಬೇತಿ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಕೊರೊನಾ ವೈರಾಣು ಹರಡುವ ಭೀತಿಯಿಂದಾಗಿ ಲಾಕ್ಡೌನ್ ಘೋಷಿಸಲಾಗಿದೆ. ಹೀಗಾಗಿ, ವಿದ್ಯಾರ್ಥಿಗಳಿಗೆ ಉಚಿತವಾಗಿ ಆನ್ಲೈನ್ ತರಬೇತಿ ನೀಡುತ್ತಿರುವುದು ಒಳ್ಳೆಯದು’ ಎಂದರು.</p>.<p>ಹುದ್ದಾರ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿಜಯ ಹುದಾರ, ‘ನಾವು ಉಚಿತವಾಗಿ ತರಬೇತಿ ನೀಡುತ್ತಿದ್ದೇವೆ. ರಾಜ್ಯದ ಯಾವುದೇ ವಿದ್ಯಾರ್ಥಿ ಬೇಕಾದರೂ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಮೊ: 9902995519 ಸಂಪರ್ಕಿಸಬಹುದು’ ಎಂದು ತಿಳಿಸಿದರು.</p>.<p>ಅನಂತರಾವ ಜೋಶಿ, ಸಂಜಯ ಕುಲಕರ್ಣಿ, ಆರ್.ಪಿ. ಹೊನಗೌಡರ, ಶಿವಾನಂದ ಕಾಂಬಳೆ, ಪೂರ್ಣಿಮಾ ಹುದ್ದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>