ಅಥಣಿ: ‘ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟವಾಗಿದೆ. ವಿದ್ಯಾರ್ಥಿಗಳು ಭವಿಷ್ಯವನ್ನು ಉತ್ತಮವಾಗಿ ರೂಪಿಸುವಂತಹ ಸಮಯವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕಾಡಸಿದ್ದೇಶ್ವರ ಆಶ್ರಮದ ಕಾಡಯ್ಯ ಸ್ವಾಮೀಜಿ ಸಲಹೆ ನೀಡಿದರು.
ಇಲ್ಲಿನ ಹುದ್ದಾರ ಶಿಕ್ಷಣ ಸಂಸ್ಥೆ ಹಾಗೂ ಕೊಕಟನೂರದ ಕಲ್ಪವೃಕ್ಷ ಶಿಕ್ಷಣ ಸಂಸ್ಥೆ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಹಮ್ಮಿಕೊಂಡಿರುವ ಆನ್ಲೈನ್ ತರಬೇತಿ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
‘ಕೊರೊನಾ ವೈರಾಣು ಹರಡುವ ಭೀತಿಯಿಂದಾಗಿ ಲಾಕ್ಡೌನ್ ಘೋಷಿಸಲಾಗಿದೆ. ಹೀಗಾಗಿ, ವಿದ್ಯಾರ್ಥಿಗಳಿಗೆ ಉಚಿತವಾಗಿ ಆನ್ಲೈನ್ ತರಬೇತಿ ನೀಡುತ್ತಿರುವುದು ಒಳ್ಳೆಯದು’ ಎಂದರು.
ಹುದ್ದಾರ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿಜಯ ಹುದಾರ, ‘ನಾವು ಉಚಿತವಾಗಿ ತರಬೇತಿ ನೀಡುತ್ತಿದ್ದೇವೆ. ರಾಜ್ಯದ ಯಾವುದೇ ವಿದ್ಯಾರ್ಥಿ ಬೇಕಾದರೂ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಮೊ: 9902995519 ಸಂಪರ್ಕಿಸಬಹುದು’ ಎಂದು ತಿಳಿಸಿದರು.