ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ಷೇತ್ರದಲ್ಲಿ ಹಿಂದೆ ಅನುದಾನದ ಸದುಪಯೋಗವೇ ಆಗಿಲ್ಲ’

Last Updated 11 ಸೆಪ್ಟೆಂಬರ್ 2020, 16:19 IST
ಅಕ್ಷರ ಗಾತ್ರ

ಬೆಳಗಾವಿ: ‘ಕ್ಷೇತ್ರದಲ್ಲಿ ಈ ಹಿಂದೆ ಅನುದಾನ ಸದುಪಯೋಗವೇ ಆಗಿಲ್ಲ’ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ದೂರಿದರು.

ಕ್ಷೇತ್ರದ ಹೌಸಿಂಗ್ ಬೋರ್ಡ್‌ ಕಾಲೊನಿಯಲ್ಲಿ ₹ 1.40 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಕ್ಷೇತ್ರವನ್ನು ಸುತ್ತು ಹಾಕಿ ಗಮನಿಸಿದರೆ ಈವರೆಗೂ ಏಕೆ ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸಲಿಲ್ಲ ಎನ್ನುವುದೇ ಅರ್ಥವಾಗುತ್ತಿಲ್ಲ. ಸರ್ಕಾರದ ಅನುದಾನವಿರುವಾಗ ಅದನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನವೇ ಆಗಲಿಲ್ಲ. ನಾನು ಶಾಸಕಿಯಾಗಿ ಆಯ್ಕೆಯಾದ ನಂತರ ಯಾವ ಯೋಜನೆಗಳಲ್ಲಿ ಅನುದಾನ ತರಲು ಸಾಧ್ಯವಿದೆಯೇ ಅದ್ಯಾವುದನ್ನೂ ಬಿಡುತ್ತಿಲ್ಲ. ಮೊದಲ ಬಾರಿಗೆ ಶಾಸಕಿಯಾದರೂ ಹಿರಿಯ ಶಾಸಕರು ಕೂಡ ತರದಷ್ಟು ಅನುದಾನವನ್ನು ತಂದಿದ್ದೇನೆ’ ಎಂದರು.

ನಿವಾಸಿಗಳು, ಅವಿನಾಶ್ ಬೆಲ್ಲದ, ಭೂಪಾಲಿ, ಗುತ್ತಿಗೆದಾರರು ಹಾಗೂಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT