ರಾಮದುರ್ಗ (ಬೆಳಗಾವಿ): ಇಲ್ಲಿ ಸೋಮವಾರ ಜೂಜಾಟದಲ್ಲಿ ತೊಡಗಿದ್ದಾಗ, ದಾಳಿ ನಡೆಸಿದ ಪೊಲೀಸರಿಂದ ತಪ್ಪಿಸಿಕೊಳ್ಳಲು ಇಬ್ಬರು ಮಲಪ್ರಭಾ ನದಿಗೆ ಹಾರಿದ್ದಾರೆ.
ನದಿಯ ಪಕ್ಕದ ಪೊದೆಯ ಬಳಿ ಗುಂಪೊಂದು ಜೂಜಾಡುತ್ತಿತ್ತು. ಪೊಲೀಸರು ಬಂದಿದ್ದರಿಂದ ಅವರು ಚದುರಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.