‘ಗಾಂಧಿ ಅವರ ಹೋರಾಟದ ಬದುಕು, ಸತ್ಯದ ಅನ್ವೇಷಣೆ, ಅಹಿಂಸಾ ಮಾರ್ಗದ ಜೀವನದ ವಿವಿಧ ಮಗ್ಗುಲುಗಳನ್ನು ಡಿಜಿಟಲ್ ಮಾಧ್ಯಮದ ಮೂಲಕ ಪರಿಚಯಿಸಲು ಪ್ರದರ್ಶನ ಕೊಠಡಿ ನಿರ್ಮಿಸಲಾಗಿದೆ. ಗಾಂಧೀಜಿ ಸಮಗ್ರ ಜೀವನದ ಮೇಲೆ ಬೆಳಕು ಚೆಲ್ಲುವಂತಹ ಪುಸ್ತಕಗಳು ಮತ್ತು ಸಂಶೋಧನಾ ಕೃತಿಗಳನ್ನು ಜನರಿಗೆ ಸುಲಭವಾಗಿ ದೊರಕಿಸುವುದಕ್ಕಾಗಿ ಕಿರು ಗ್ರಂಥಾಲಯ ಸ್ಥಾಪನೆಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ಭವನದ ಹೊರ ಆವರಣದಲ್ಲಿ ಗಾಂಧಿ ಅವರ ಧ್ಯಾನಸ್ಥ ಬೃಹತ್ ಪುತ್ಥಳಿ, ಪ್ರವೇಶದ್ವಾರದ ಎದುರಿನಲ್ಲಿ ಇನ್ನೊಂದು ಕಂಚಿನ ಪುತ್ಥಳಿ ಸ್ಥಾಪಿಸಲಾಗಿದೆ. ಆವರಣದ ಇನ್ನೊಂದು ಬದಿಯಲ್ಲಿ ಗಾಂಧಿ ನೇತೃತ್ವದಲ್ಲಿ ನಡೆದ ದಂಡಿ ಯಾತ್ರೆಯ ದೃಶ್ಯವನ್ನು ಪ್ರತಿಬಿಂಬಿಸುವ ಆಕರ್ಷಕ ಪುತ್ಥಳಿ ತಲೆ ಎತ್ತಿದೆ’ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ತಿಳಿಸಿದ್ದಾರೆ.