<p><strong>ಕೌಜಲಗಿ:</strong> ಗಣೇಶ ಹಬ್ಬವನ್ನು ಸ್ಥಳೀಯರು ದುಂದು ವೆಚ್ಚ ಮಾಡಿ ಆಚರಿಸುವ ಬದಲು ಸಂಕಷ್ಟದಲ್ಲಿರುವ ಬಡವರಿಗೆ, ಅನಾಥಾಶ್ರಮದ ಮಕ್ಕಳಿಗೆ ಸಹಾಯ ಮಾಡಲು ಮುಂದಾಗಬೇಕು ಎಂದು ಪಿಎಸ್ಐ ಬಿ. ಆನಂದ ಹೇಳಿದರು. </p>.<p>ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಮೀಪದ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿದರು.</p>.<p>ಗಣೇಶ ವಿಸರ್ಜನೆಯ ಸಮಯದಲ್ಲಿ ಡಾಲ್ಬಿ ಸೌಂಡ ಸಿಸ್ಟಮ್ ಬಳಸುವುದು ಸಂಪೂರ್ಣ ನಿಷೇದಿಸಲಾಗಿದೆ. ಹೆಸ್ಕಾಂ ಮತ್ತು ಸಿಪಿಐ ಕಛೇರಿಯಿಂದ ಸಾಮಾನ್ಯ ಧ್ವನಿವರ್ದಕ ಬಳಕೆಗೆ ಅನುಮತಿ ಪಡೆಯಬೇಕು. ಅಶ್ಲೀಲ, ಕೋಮು ಗಲಭೆ ಪ್ರಚೋದಿಸುವ ಹಾಡು, ಸಂಭಾಷಣೆಗಳನ್ನು ಬಿತ್ತರಿಸಬಾರದು ಎಂದು ಸ್ಥಳೀಯರಿಗೆ ಸಲಹೆಗಳನ್ನು ತಿಳಿಸಿದರು.</p>.<p>ತಾಪಂ ಮಾಜಿ ಸದಸ್ಯ ಲಕ್ಷ್ಮಣ ನೀಲಣ್ಣವರ, ಸುರೇಶ ಮಾಳೇದ, ಹನುಮಂತ ವಡೇರ, ಶಂಕರ ಕೋಣಿ, ಮಾರುತಿ ಚಂದರಗಿ, ಮುತ್ತೆಪ್ಪ ವಡೇರ, ಗಿರೀಶ ಗಾಣಗಿ, ವೀರಣ್ಣ ದೇಯಣ್ಣವರ, ಈರಪ್ಪ ಕಂಬಾರ, ಬಸವರಾಜ ದೇಯಣ್ಣವರ, ಅಜ್ಜಪ್ಪ ಕೊಟೂರ, ಫಿರೋಜ ಮಿರ್ಜಾನಾಯ್ಕ, ಶಿವಾನಂದ ಕಂಬಾರ, ಮಹೆಬೂಬ ಯಲಿಗಾರ, ಸ್ಥಳೀಯ ಬೀಟ್ ಪೊಲೀಸ್ ಪೇದೆ ಮಹೇಶ ಲದ್ದಿ, ಬಸವರಾಜ ಕ್ವಾನ್ಯಾಗೋಳ, ಮಾಳು ಆಡಿನ, ಸ್ಥಳೀಯ ವಿವಿಧ ಸಮಾಜದ ಮುಖಂಡರು, ಗಣ್ಯರು, ವಿವಿಧ ಯುವಕರು, ಸ್ಥಳೀಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೌಜಲಗಿ:</strong> ಗಣೇಶ ಹಬ್ಬವನ್ನು ಸ್ಥಳೀಯರು ದುಂದು ವೆಚ್ಚ ಮಾಡಿ ಆಚರಿಸುವ ಬದಲು ಸಂಕಷ್ಟದಲ್ಲಿರುವ ಬಡವರಿಗೆ, ಅನಾಥಾಶ್ರಮದ ಮಕ್ಕಳಿಗೆ ಸಹಾಯ ಮಾಡಲು ಮುಂದಾಗಬೇಕು ಎಂದು ಪಿಎಸ್ಐ ಬಿ. ಆನಂದ ಹೇಳಿದರು. </p>.<p>ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಮೀಪದ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿದರು.</p>.<p>ಗಣೇಶ ವಿಸರ್ಜನೆಯ ಸಮಯದಲ್ಲಿ ಡಾಲ್ಬಿ ಸೌಂಡ ಸಿಸ್ಟಮ್ ಬಳಸುವುದು ಸಂಪೂರ್ಣ ನಿಷೇದಿಸಲಾಗಿದೆ. ಹೆಸ್ಕಾಂ ಮತ್ತು ಸಿಪಿಐ ಕಛೇರಿಯಿಂದ ಸಾಮಾನ್ಯ ಧ್ವನಿವರ್ದಕ ಬಳಕೆಗೆ ಅನುಮತಿ ಪಡೆಯಬೇಕು. ಅಶ್ಲೀಲ, ಕೋಮು ಗಲಭೆ ಪ್ರಚೋದಿಸುವ ಹಾಡು, ಸಂಭಾಷಣೆಗಳನ್ನು ಬಿತ್ತರಿಸಬಾರದು ಎಂದು ಸ್ಥಳೀಯರಿಗೆ ಸಲಹೆಗಳನ್ನು ತಿಳಿಸಿದರು.</p>.<p>ತಾಪಂ ಮಾಜಿ ಸದಸ್ಯ ಲಕ್ಷ್ಮಣ ನೀಲಣ್ಣವರ, ಸುರೇಶ ಮಾಳೇದ, ಹನುಮಂತ ವಡೇರ, ಶಂಕರ ಕೋಣಿ, ಮಾರುತಿ ಚಂದರಗಿ, ಮುತ್ತೆಪ್ಪ ವಡೇರ, ಗಿರೀಶ ಗಾಣಗಿ, ವೀರಣ್ಣ ದೇಯಣ್ಣವರ, ಈರಪ್ಪ ಕಂಬಾರ, ಬಸವರಾಜ ದೇಯಣ್ಣವರ, ಅಜ್ಜಪ್ಪ ಕೊಟೂರ, ಫಿರೋಜ ಮಿರ್ಜಾನಾಯ್ಕ, ಶಿವಾನಂದ ಕಂಬಾರ, ಮಹೆಬೂಬ ಯಲಿಗಾರ, ಸ್ಥಳೀಯ ಬೀಟ್ ಪೊಲೀಸ್ ಪೇದೆ ಮಹೇಶ ಲದ್ದಿ, ಬಸವರಾಜ ಕ್ವಾನ್ಯಾಗೋಳ, ಮಾಳು ಆಡಿನ, ಸ್ಥಳೀಯ ವಿವಿಧ ಸಮಾಜದ ಮುಖಂಡರು, ಗಣ್ಯರು, ವಿವಿಧ ಯುವಕರು, ಸ್ಥಳೀಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>