<p><strong>ಬೆಳಗಾವಿ</strong>: ಬೆಳಗಾವಿ ನಗರ ಹಾಗೂ ಖಾನಾಪುರ ತಾಲ್ಲೂಕಿನ ನಂದಗಡ ಗ್ರಾಮದಲ್ಲಿ ಶನಿವಾರ, ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p><p>ನಗರದ ಬೃಹತ್ ಮೂರ್ತಿಗಳನ್ನು ವಿಸರ್ಜನೆ ಮಾಡಲು ಸಿದ್ಧಪಡಿಸಿದ ಜಕ್ಕೇರಿ ಹೊಂಡದಲ್ಲಿ ಬಿದ್ದ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ್ (33) ಮೃತಪಟ್ಟರು. ಮೂರ್ತಿಯ ಜತೆಗೆ ನೀರಿಗೆ ಬಿದ್ದ ಅವರನ್ನು ಜತೆಯಲ್ಲಿದ್ದವರು ಎತ್ತಿ ಹೊರಕ್ಕೆ ತಂದರು. ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದರು ಎಂದು ತಿಳಿಸಲಾಗಿದೆ.</p><p>ಇನ್ನೊಂದೆಡೆ, ನಂದಗಡ ಗ್ರಾಮದಲ್ಲಿ ಮೂರ್ತಿ ವಿಸರ್ಜನೆಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಯುವಕನ ಹೆಸರು, ಊರು ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.ಶಿಗ್ಗಾವಿ | ಡಿಜೆ ಇಲ್ಲದೆ ವಿಸರ್ಜನೆ ಇಲ್ಲ: ಗಣೇಶ ಮಂಡಳಿ ಸಭೆಯಲ್ಲಿ ನಿರ್ಧಾರ.ಕೊಪ್ಪಳ | ಮುಸ್ಲಿಂರಿಂದ ಗಣೇಶ ಮೂರ್ತಿ ಪೂಜೆ: ಹಿಂದೂಗಳಿಂದ ಈದ್ಗೆ ಅನ್ನಸಂತರ್ಪಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಬೆಳಗಾವಿ ನಗರ ಹಾಗೂ ಖಾನಾಪುರ ತಾಲ್ಲೂಕಿನ ನಂದಗಡ ಗ್ರಾಮದಲ್ಲಿ ಶನಿವಾರ, ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p><p>ನಗರದ ಬೃಹತ್ ಮೂರ್ತಿಗಳನ್ನು ವಿಸರ್ಜನೆ ಮಾಡಲು ಸಿದ್ಧಪಡಿಸಿದ ಜಕ್ಕೇರಿ ಹೊಂಡದಲ್ಲಿ ಬಿದ್ದ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ್ (33) ಮೃತಪಟ್ಟರು. ಮೂರ್ತಿಯ ಜತೆಗೆ ನೀರಿಗೆ ಬಿದ್ದ ಅವರನ್ನು ಜತೆಯಲ್ಲಿದ್ದವರು ಎತ್ತಿ ಹೊರಕ್ಕೆ ತಂದರು. ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದರು ಎಂದು ತಿಳಿಸಲಾಗಿದೆ.</p><p>ಇನ್ನೊಂದೆಡೆ, ನಂದಗಡ ಗ್ರಾಮದಲ್ಲಿ ಮೂರ್ತಿ ವಿಸರ್ಜನೆಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಯುವಕನ ಹೆಸರು, ಊರು ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.ಶಿಗ್ಗಾವಿ | ಡಿಜೆ ಇಲ್ಲದೆ ವಿಸರ್ಜನೆ ಇಲ್ಲ: ಗಣೇಶ ಮಂಡಳಿ ಸಭೆಯಲ್ಲಿ ನಿರ್ಧಾರ.ಕೊಪ್ಪಳ | ಮುಸ್ಲಿಂರಿಂದ ಗಣೇಶ ಮೂರ್ತಿ ಪೂಜೆ: ಹಿಂದೂಗಳಿಂದ ಈದ್ಗೆ ಅನ್ನಸಂತರ್ಪಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>