<p>ಉಗರಗೋಳ (ಸವದತ್ತಿ ತಾ.): ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಶುಕ್ರವಾರ ಸರಳವಾಗಿ ಗಣೇಶ ಚತುರ್ಥಿ ಆಚರಿಸಲಾಯಿತು.</p>.<p>ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪಿಸಿದ ಸಿಬ್ಬಂದಿ ವಿಶೇಷ ಪೂಜೆ ಸಲ್ಲಿಸಿದರು. ಸಕಲ ಜೀವರಾಶಿ ಒಳಿತಿಗೆ ಪ್ರಾರ್ಥಿಸಿದರು. ಯಲ್ಲಮ್ಮ ದೇವಸ್ಥಾನದ ಅರ್ಚಕ ನಿಂಗನಗೌಡ ಸಾವಕ್ಕನವರ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ನಾಗರತ್ನಾ ಚೋಳಿನ್, ಆರ್.ಎಚ್. ಸವದತ್ತಿ, ಸದಾನಂದ ಈಟಿ, ಅನಿಲ್ ಗುಡಿಮನಿ, ಎಚ್.ಸಿ. ಸಿದ್ದಸಮುದ್ರ, ಎಸ್.ಎಸ್. ಪಾಟೀಲ, ಬಸು ಸಂಕಣ್ಣವರ ಇದ್ದರು.</p>.<p>ಕೋವಿಡ್ ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಂಡು ಉಗರಗೋಳ ಗ್ರಾಮದಲ್ಲಿ ಗಣೇಶ ಚತುರ್ಥಿಯನ್ನು ಶುಕ್ರವಾರ ಆಚರಿಸಲಾಯಿತು. ಜನರು ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿದರು. ಗ್ರಾಮದ ದೇವಸ್ಥಾನಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ರಮೇಶ ಪಾಟೀಲ, ಮಲ್ಲನಗೌಡ ಪಾಟೀಲ, ದಿಲಾವರ ಕಿಲಿಕೈ, ರಾಜು ಪಾಟೀಲ, ಶೇಖನಗೌಡ ಪಾಟೀಲ, ರಾಯನಗೌಡ ಪಾಟೀಲ, ಭರಮಪ್ಪ ಗೋರಾಬಾಳ, ಶಂಕರಗೌಡ ಕಾಳಿಂಗೌಡ್ರ, ಪರಸನಗೌಡ ಕಾಳಿಂಗೌಡ್ರ, ಮಂಜುನಾಥಗೌಡ ಚನ್ನಪ್ಪಗೌಡ್ರ, ಮಾರುತಿ ರಾವಳ, ಇಮಾಮಹುಸೇನ್ ಗೂಡುನವರ, ಸುಮಂತ್ ದಂಡಾಪುರ, ಮಂಜು ಸಂಗಟಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಗರಗೋಳ (ಸವದತ್ತಿ ತಾ.): ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಶುಕ್ರವಾರ ಸರಳವಾಗಿ ಗಣೇಶ ಚತುರ್ಥಿ ಆಚರಿಸಲಾಯಿತು.</p>.<p>ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪಿಸಿದ ಸಿಬ್ಬಂದಿ ವಿಶೇಷ ಪೂಜೆ ಸಲ್ಲಿಸಿದರು. ಸಕಲ ಜೀವರಾಶಿ ಒಳಿತಿಗೆ ಪ್ರಾರ್ಥಿಸಿದರು. ಯಲ್ಲಮ್ಮ ದೇವಸ್ಥಾನದ ಅರ್ಚಕ ನಿಂಗನಗೌಡ ಸಾವಕ್ಕನವರ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ನಾಗರತ್ನಾ ಚೋಳಿನ್, ಆರ್.ಎಚ್. ಸವದತ್ತಿ, ಸದಾನಂದ ಈಟಿ, ಅನಿಲ್ ಗುಡಿಮನಿ, ಎಚ್.ಸಿ. ಸಿದ್ದಸಮುದ್ರ, ಎಸ್.ಎಸ್. ಪಾಟೀಲ, ಬಸು ಸಂಕಣ್ಣವರ ಇದ್ದರು.</p>.<p>ಕೋವಿಡ್ ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಂಡು ಉಗರಗೋಳ ಗ್ರಾಮದಲ್ಲಿ ಗಣೇಶ ಚತುರ್ಥಿಯನ್ನು ಶುಕ್ರವಾರ ಆಚರಿಸಲಾಯಿತು. ಜನರು ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿದರು. ಗ್ರಾಮದ ದೇವಸ್ಥಾನಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ರಮೇಶ ಪಾಟೀಲ, ಮಲ್ಲನಗೌಡ ಪಾಟೀಲ, ದಿಲಾವರ ಕಿಲಿಕೈ, ರಾಜು ಪಾಟೀಲ, ಶೇಖನಗೌಡ ಪಾಟೀಲ, ರಾಯನಗೌಡ ಪಾಟೀಲ, ಭರಮಪ್ಪ ಗೋರಾಬಾಳ, ಶಂಕರಗೌಡ ಕಾಳಿಂಗೌಡ್ರ, ಪರಸನಗೌಡ ಕಾಳಿಂಗೌಡ್ರ, ಮಂಜುನಾಥಗೌಡ ಚನ್ನಪ್ಪಗೌಡ್ರ, ಮಾರುತಿ ರಾವಳ, ಇಮಾಮಹುಸೇನ್ ಗೂಡುನವರ, ಸುಮಂತ್ ದಂಡಾಪುರ, ಮಂಜು ಸಂಗಟಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>