ಕೋವಿಡ್ ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಂಡು ಉಗರಗೋಳ ಗ್ರಾಮದಲ್ಲಿ ಗಣೇಶ ಚತುರ್ಥಿಯನ್ನು ಶುಕ್ರವಾರ ಆಚರಿಸಲಾಯಿತು. ಜನರು ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿದರು. ಗ್ರಾಮದ ದೇವಸ್ಥಾನಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ರಮೇಶ ಪಾಟೀಲ, ಮಲ್ಲನಗೌಡ ಪಾಟೀಲ, ದಿಲಾವರ ಕಿಲಿಕೈ, ರಾಜು ಪಾಟೀಲ, ಶೇಖನಗೌಡ ಪಾಟೀಲ, ರಾಯನಗೌಡ ಪಾಟೀಲ, ಭರಮಪ್ಪ ಗೋರಾಬಾಳ, ಶಂಕರಗೌಡ ಕಾಳಿಂಗೌಡ್ರ, ಪರಸನಗೌಡ ಕಾಳಿಂಗೌಡ್ರ, ಮಂಜುನಾಥಗೌಡ ಚನ್ನಪ್ಪಗೌಡ್ರ, ಮಾರುತಿ ರಾವಳ, ಇಮಾಮಹುಸೇನ್ ಗೂಡುನವರ, ಸುಮಂತ್ ದಂಡಾಪುರ, ಮಂಜು ಸಂಗಟಿ ಇತರರು ಇದ್ದರು.