ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಗಾಂಜಾ ಪ್ರಕರಣ, ಪೊಲೀಸರ ವಶದಲ್ಲಿದ್ದಾಗಲೇ ಆರೋಪಿ ಸಾವು

Last Updated 11 ನವೆಂಬರ್ 2022, 19:16 IST
ಅಕ್ಷರ ಗಾತ್ರ

ಬೆಳಗಾವಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಕರೆತರಲಾಗಿದ್ದ ಆರೋಪಿಯೊಬ್ಬರು ಪೊಲೀಸರ ವಶದಲ್ಲಿದ್ದಾಗಲೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅನಾರೋಗ್ಯದಿಂದ ಆತ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ(45) ಮೃತರು.

'ಗಾಂಜಾ ಪ್ರಕರಣದ ವಿಚಾರಣೆಗೆ ಈತನನ್ನು ಬೆಳಗಾವಿಗೆ ಕರೆತರುವಾಗ ಕಾಕತಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಅಗತ್ಯ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದೆವು. ಚೇತರಿಸಿಕೊಂಡ ನಂತರ, ಬೆಳಗಾವಿ ಗ್ರಾಮೀಣ ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದೆವು. ಈ ವೇಳೆ ಮತ್ತೆ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದೆವು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪತ್ನಿ ನೀಡಿದ ದೂರು ಆಧರಿಸಿ, ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ಒಪ್ಪಿಸಲಾಗುವುದು' ಎಂದು ಡಿಸಿಪಿ(ಕಾನೂನು ಮತ್ತು ಸುವ್ಯವಸ್ಥೆ) ರವೀಂದ್ರ ಗದಾಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT