‘ಗಾಂಜಾ ಬೆಳೆಯುವುದು, ಮಾದಕ ವಸ್ತುಗಳ ಮಾರಾಟ, ಸಾಗಣೆಯನ್ನು ಬಂದ್ ಮಾಡುವ ಮೂಲಕ ಬೇಡಿಕೆ ಮತ್ತು ಪೂರೈಕೆ ನಡುವಿನ ಸರಪಳಿ ತುಂಡರಿಸುವುದು ನಮ್ಮ ಉದ್ದೇಶವಾಗಿದೆ. ಜಾಲವನ್ನು ಪತ್ತೆ ಹಚ್ಚಲಾಗುತ್ತಿದೆ. ಸಮಾಜಘಾತುಕ ಶಕ್ತಿಗಳನ್ನು ಬಂಧಿಸಿ, ಕಾನೂನಿನ ಅಡಿ ಶಿಕ್ಷೆ ಕೊಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನಿರಂತರವಾಗಿ ನಿಗಾ ವಹಿಸಲಾಗುತ್ತಿದೆ. ಮಾದಕ ಪದಾರ್ಥಗಳ ವಿರುದ್ಧ ಸಮರ ಸಾರಿದ್ದೇವೆ. ಹಲವು ಮಂದಿ ಆರೋಪಿಗಳನ್ನು ಬಂಧಿಸಿ ಕಾರಾಗೃಹಕ್ಕೆ ಕಳುಹಿಸಲಾಗಿದೆ’ ಎಂದು ಹೇಳಿದರು.