<p><strong>ಗೋಕಾಕ</strong>: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳ ಪ್ರವಾಹದಿಂದ ನಗರದ 200 ಮನೆಗಳು ಜಲಾವೃತವಾಗಿವೆ. ಎಲ್ಲ ಕುಟುಂಬಗಳನ್ನು ನಗರದ ಮಿನ್ಸಿಪಲ್ ಶಾಲೆಯಲ್ಲಿ ತೆರೆದ ಕಾಳಜಿ ಕೇಂದ್ರಕ್ಕೆ ಸೇರಿಸಲಾಗಿದೆ. </p><p>ಇಲ್ಲಿನ ಮಟನ್ ಮಾರ್ಕೆಟ್, ಉಪ್ಪಾರ ಗಲ್ಲಿ, ಬೋಜಗಾರ ಗಲ್ಲಿ, ದಾಳಂಬರಿತೋಟ, ಹಳೆ ದನದ ಪೇಟೆ ಸೇರಿ ಮತ್ತಿತರ ಪ್ರದೇಶಗಳ ಮನೆಗಳಿಗೆ ಮಂಗಳವಾರ ಮಧ್ಯರಾತ್ರಿಯೇ ನೀರು ನುಗ್ಗಿದೆ. ಜನರು ರಾತೋರಾತ್ರಿ ಕೈಗೆ ಸಿಕ್ಕ ಪಾತ್ರೆ, ಗ್ಯಾಸ್, ಸಿಲಿಂಡರ್, ಬಟ್ಟೆ-ಬರೆ ಕಟ್ಟಿಕೊಂಡು, ಪುಟ್ಟ ಮಕ್ಕಳನ್ನು ಎತ್ತಿಕೊಂಡು ಮನೆ ಬಿಟ್ಟು ಬಂದಿದ್ದಾರೆ.</p><p>200 ಕುಟುಂಬಗಳಲ್ಲಿ 40ಕ್ಕೂ ಹೆಚ್ಚು ಪುಟಾಣಿ ಮಕ್ಕಳೂ ಇದ್ದಾರೆ.</p><p><strong>ಶಾಶ್ವತ ಪರಿಹಾರಕ್ಕೆ ಆಗ್ರಹ:</strong> ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕಾಳಜಿ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಂತೆ ಸಂತ್ರಸ್ತ ಮಹಿಳೆಯರು ಒಕ್ಕೊರಲಿನಿಂದ ಧ್ವನಿ ಎತ್ತಿದರು.</p><p>'ಇನ್ನೆಷ್ಟು ವರ್ಷ ಬರೀ ಪರಿಹಾರ ನೀಡುತ್ತೀರಿ, ನಮ್ಮನ್ನು ಸ್ಥಳಾಂತರಿಸಿ ಶಾಶ್ವತ ನೆರಳು ಮಾಡಿ ಕೊಡಿ' ಎಂದು ಆಗ್ರಹಿಸಿದರು.</p><p>ಜಿಲ್ಲಾಧಿಕಾರಿ ಕಾಲಿಗೆ ಬಿದ್ದ ಮಹಿಳೆಯೊಬ್ಬರು, 'ಅಳಲು ತೋಡಿಕೊಂಡರು. ಪ್ರತಿ ವರ್ಷ ಈ ಗೋಳು ನಮಗೆ ತಪ್ಪಿದ್ದಲ್ಲ. ಮಕ್ಕಳಿಗೆ ಬಹಳ ಕಷ್ಟವಾಗುತ್ತಿದೆ. ದಯವಿಟ್ಟು ಶಾಶ್ವತ ಪರಿಹಾರ ಕೊಡಿ' ಎಂದು ಅಂಗಲಾಚಿದರು.</p><p>ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಮೊಹಮ್ಮದ್ ರೋಷನ್, 'ನೆರೆ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ವ್ಯವಸ್ಥೆ ಕಲ್ಪಿಸಿದ್ದೇವೆ.12 ಚಿಕ್ಕಮಕ್ಕಳಿಗೆ ತೊಂದರೆ ಆಗದಂತೆ ಪ್ರತ್ಯೇಕ ವ್ಯವಸ್ಥೆ ನೀಡಲಾಗುವುದು. ಅತ್ಯಂತ ಸೂಕ್ಷ್ಮತೆಯಿಂದ ಈ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದೇವೆ' ಎಂದರು.</p><p>'ಊಟ, ವಸತಿ, ನೀರು, ಶೌಚಾಲಯ ಸೇರಿದಂತೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆ ಆಗದಂತೆ ಉತ್ತಮ ವ್ಯವಸ್ಥೆ ಕಲ್ಪಿಸಿದ್ದೇವೆ. ಇಲ್ಲಿನ ಸಂತ್ರಸ್ತರು ಬಹುತೇಕ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಹಾಗಾಗಿ, ಮನೆ ಮಾಲೀಕರಿಗೆ ಪರಿಹಾರ ತಲುಪುತ್ತದೆ. ಆದರೆ, ನಿಜವಾದ ಸಂತ್ರಸ್ತರಿಗೆ ಪರಿಹಾರ ನೀಡಲ್ಲ ಎಂಬ ಆರೋಪಕ್ಕೆ ನಿಯಮ ಆ ರೀತಿ ಇದೆ. ಈ ಸಂಬಂಧ ಸರ್ಕಾರದ ಗಮನಕ್ಕೆ ತರುತ್ತೇನೆ. ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಂತ್ರಸ್ತರಿಗೂ ಪರಿಹಾರ ನೀಡುವಂತೆ ತಹಶೀಲ್ದಾರ್ ಅವರಿಗೆ ಸೂಚಿಸುತ್ತೇನೆ' ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.</p><p>ಪ್ರವಾಹ ಪರಿಸ್ಥಿತಿಯಿಂದ ಜಾನುವಾರುಗಳಿಗೆ ಸಮಸ್ಯೆ ಆಗದಂತೆ ಮೇವು ಬ್ಯಾಂಕ್ ಸ್ಥಾಪಿಸುವ ಬಗ್ಗೆ ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕರಿಗೆ ತಿಳಿಸಿದ್ದೇವೆ. ಹೋದ ವರ್ಷ ಅಥಣಿ ತಾಲ್ಲೂಕಿನ ಸಪ್ತಸಾಗರ ಗ್ರಾಮದಲ್ಲಿ ಸಮಸ್ಯೆ ಆಗಿತ್ತು. ಈ ವರ್ಷ ಎಲ್ಲಿಯೂ ಮೇವಿನ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ</strong>: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳ ಪ್ರವಾಹದಿಂದ ನಗರದ 200 ಮನೆಗಳು ಜಲಾವೃತವಾಗಿವೆ. ಎಲ್ಲ ಕುಟುಂಬಗಳನ್ನು ನಗರದ ಮಿನ್ಸಿಪಲ್ ಶಾಲೆಯಲ್ಲಿ ತೆರೆದ ಕಾಳಜಿ ಕೇಂದ್ರಕ್ಕೆ ಸೇರಿಸಲಾಗಿದೆ. </p><p>ಇಲ್ಲಿನ ಮಟನ್ ಮಾರ್ಕೆಟ್, ಉಪ್ಪಾರ ಗಲ್ಲಿ, ಬೋಜಗಾರ ಗಲ್ಲಿ, ದಾಳಂಬರಿತೋಟ, ಹಳೆ ದನದ ಪೇಟೆ ಸೇರಿ ಮತ್ತಿತರ ಪ್ರದೇಶಗಳ ಮನೆಗಳಿಗೆ ಮಂಗಳವಾರ ಮಧ್ಯರಾತ್ರಿಯೇ ನೀರು ನುಗ್ಗಿದೆ. ಜನರು ರಾತೋರಾತ್ರಿ ಕೈಗೆ ಸಿಕ್ಕ ಪಾತ್ರೆ, ಗ್ಯಾಸ್, ಸಿಲಿಂಡರ್, ಬಟ್ಟೆ-ಬರೆ ಕಟ್ಟಿಕೊಂಡು, ಪುಟ್ಟ ಮಕ್ಕಳನ್ನು ಎತ್ತಿಕೊಂಡು ಮನೆ ಬಿಟ್ಟು ಬಂದಿದ್ದಾರೆ.</p><p>200 ಕುಟುಂಬಗಳಲ್ಲಿ 40ಕ್ಕೂ ಹೆಚ್ಚು ಪುಟಾಣಿ ಮಕ್ಕಳೂ ಇದ್ದಾರೆ.</p><p><strong>ಶಾಶ್ವತ ಪರಿಹಾರಕ್ಕೆ ಆಗ್ರಹ:</strong> ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕಾಳಜಿ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಂತೆ ಸಂತ್ರಸ್ತ ಮಹಿಳೆಯರು ಒಕ್ಕೊರಲಿನಿಂದ ಧ್ವನಿ ಎತ್ತಿದರು.</p><p>'ಇನ್ನೆಷ್ಟು ವರ್ಷ ಬರೀ ಪರಿಹಾರ ನೀಡುತ್ತೀರಿ, ನಮ್ಮನ್ನು ಸ್ಥಳಾಂತರಿಸಿ ಶಾಶ್ವತ ನೆರಳು ಮಾಡಿ ಕೊಡಿ' ಎಂದು ಆಗ್ರಹಿಸಿದರು.</p><p>ಜಿಲ್ಲಾಧಿಕಾರಿ ಕಾಲಿಗೆ ಬಿದ್ದ ಮಹಿಳೆಯೊಬ್ಬರು, 'ಅಳಲು ತೋಡಿಕೊಂಡರು. ಪ್ರತಿ ವರ್ಷ ಈ ಗೋಳು ನಮಗೆ ತಪ್ಪಿದ್ದಲ್ಲ. ಮಕ್ಕಳಿಗೆ ಬಹಳ ಕಷ್ಟವಾಗುತ್ತಿದೆ. ದಯವಿಟ್ಟು ಶಾಶ್ವತ ಪರಿಹಾರ ಕೊಡಿ' ಎಂದು ಅಂಗಲಾಚಿದರು.</p><p>ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಮೊಹಮ್ಮದ್ ರೋಷನ್, 'ನೆರೆ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ವ್ಯವಸ್ಥೆ ಕಲ್ಪಿಸಿದ್ದೇವೆ.12 ಚಿಕ್ಕಮಕ್ಕಳಿಗೆ ತೊಂದರೆ ಆಗದಂತೆ ಪ್ರತ್ಯೇಕ ವ್ಯವಸ್ಥೆ ನೀಡಲಾಗುವುದು. ಅತ್ಯಂತ ಸೂಕ್ಷ್ಮತೆಯಿಂದ ಈ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದೇವೆ' ಎಂದರು.</p><p>'ಊಟ, ವಸತಿ, ನೀರು, ಶೌಚಾಲಯ ಸೇರಿದಂತೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆ ಆಗದಂತೆ ಉತ್ತಮ ವ್ಯವಸ್ಥೆ ಕಲ್ಪಿಸಿದ್ದೇವೆ. ಇಲ್ಲಿನ ಸಂತ್ರಸ್ತರು ಬಹುತೇಕ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಹಾಗಾಗಿ, ಮನೆ ಮಾಲೀಕರಿಗೆ ಪರಿಹಾರ ತಲುಪುತ್ತದೆ. ಆದರೆ, ನಿಜವಾದ ಸಂತ್ರಸ್ತರಿಗೆ ಪರಿಹಾರ ನೀಡಲ್ಲ ಎಂಬ ಆರೋಪಕ್ಕೆ ನಿಯಮ ಆ ರೀತಿ ಇದೆ. ಈ ಸಂಬಂಧ ಸರ್ಕಾರದ ಗಮನಕ್ಕೆ ತರುತ್ತೇನೆ. ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಂತ್ರಸ್ತರಿಗೂ ಪರಿಹಾರ ನೀಡುವಂತೆ ತಹಶೀಲ್ದಾರ್ ಅವರಿಗೆ ಸೂಚಿಸುತ್ತೇನೆ' ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.</p><p>ಪ್ರವಾಹ ಪರಿಸ್ಥಿತಿಯಿಂದ ಜಾನುವಾರುಗಳಿಗೆ ಸಮಸ್ಯೆ ಆಗದಂತೆ ಮೇವು ಬ್ಯಾಂಕ್ ಸ್ಥಾಪಿಸುವ ಬಗ್ಗೆ ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕರಿಗೆ ತಿಳಿಸಿದ್ದೇವೆ. ಹೋದ ವರ್ಷ ಅಥಣಿ ತಾಲ್ಲೂಕಿನ ಸಪ್ತಸಾಗರ ಗ್ರಾಮದಲ್ಲಿ ಸಮಸ್ಯೆ ಆಗಿತ್ತು. ಈ ವರ್ಷ ಎಲ್ಲಿಯೂ ಮೇವಿನ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>