ಧಾರವಾಡದ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಬಾಲಕಿಯ ಮಿದುಳು ಸೋಮವಾರ ನಿಷ್ಕ್ರಿಯಗೊಂಡಿತು. ಹೃದಯ ಇನ್ನೂ ಬಡಿದುಕೊಳ್ಳುತ್ತಿತ್ತು. ಇದೇ ಕಾಲಕ್ಕೆ ಹೃದ್ರೋಗದಿಂದ ಬಳಲುತ್ತಿರುವ ಯುವಕ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ದಾಖಲಾಗಿದ್ದರು. ವಿಷಯ ತಿಳಿದ ಯುವತಿಯ ಪಾಲಕರು ಆಕೆಯ ಅಂಗಾಂಗ ದಾನ ಮಾಡಲು ಸಮ್ಮತಿಸಿದರು. ಅದರಂತೆ, ಪರಿಣತರ ತಂಡವು ಹೃದಯವನ್ನು ಜೋಪಾನವಾಗಿ ಆಸ್ಪತ್ರೆ ತಲುಪಿಸಿದೆ.