ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ ಅಧಿವೇಶನ | ಅನಾನುಕೂಲವಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ

Published 30 ನವೆಂಬರ್ 2023, 16:17 IST
Last Updated 30 ನವೆಂಬರ್ 2023, 16:17 IST
ಅಕ್ಷರ ಗಾತ್ರ

ಬೆಳಗಾವಿ: ‘ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವವರಿಗೆ ವಸತಿ, ಊಟ, ಸಾರಿಗೆ ಸೇರಿದಂತೆ ಎಲ್ಲ ರೀತಿಯ ಮೂಲಸೌಕರ್ಯ ಒದಗಿಸಬೇಕು. ಯಾವುದೇ ರೀತಿಯ ಅನಾನುಕೂಲವಾಗದಂತೆ ಎಚ್ಚರ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿವೇಶನ ಹಿನ್ನೆಲೆಯಲ್ಲಿ ಗುರುವಾರ ನಡೆದ ಅಧಿಕಾರಿಗಳು ಹಾಗೂ ವಿವಿಧ ಸಮಿತಿಗಳ ಮುಖ್ಯಸ್ಥರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಡಿ.4ರಿಂದ ಅಧಿವೇಶನ ಆರಂಭಗೊಳ್ಳಲಿದೆ. ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ಒಂದು ದಿನ ಮುಂಚಿತವಾಗಿಯೇ ಆಗಮಿಸಿ ಸಿದ್ಧತೆ ಪರಿಶೀಲಿಸಲಿದ್ದಾರೆ. ಪ್ರತಿವರ್ಷದಂತೆ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಚಿವರು ಮತ್ತು ಶಾಸಕರಿಗೆ ಊಟದ ವ್ಯವಸ್ಥೆ ಮಾಡಲಾಗುವುದು. ಅಧಿಕಾರಿಗಳು, ಮಾರ್ಷಲ್‌ಗಳು ಹಾಗೂ ಪತ್ರಕರ್ತರಿಗೆ ಸೌಧದ ನೆಲಮಹಡಿಯಲ್ಲಿ ಪ್ರತ್ಯೇಕವಾಗಿ ಊಟದ ವ್ಯವಸ್ಥೆ ಮಾಡಲಾಗುವುದು’ ಎಂದರು.

‘ವಾಹನ ಚಾಲಕರು, ಅಧಿವೇಶನ ಕರ್ತವ್ಯಕ್ಕೆ ನಿಯೋಜನೆಗೊಂಡ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿಧಾನಸೌಧದ ಹೊರಗೆ ಊಟದ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಾವತಿ‌ ಆಧಾರದಲ್ಲಿ ಕ್ಯಾಂಟೀನ್ ಮತ್ತು ಉಪಾಹಾರ ಮಳಿಗೆ ಆರಂಭಿಸಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಸಮಿತಿ ಮುಂಚಿತವಾಗಿ ಪರಿಶೀಲಿಸಿ, ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಗೀತಾ ಕೌಲಗಿ, ರಾಜಶ್ರೀ ಜೈನಾಪುರ, ಮಲ್ಲಿಕಾರ್ಜುನ ಕಲಾದಗಿ, ಶ್ರೀಶೈಲ ಕಂಕಣವಾಡಿ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT