ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಪ್ರಾದೇಶಿಕವಾರು ಮತ್ತು ವಾತಾವರಣದಲ್ಲಿ ವಿಭಿನ್ನವಾಗಿರುವ ಕಿತ್ತೂರು ಕರ್ನಾಟಕದ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅನೇಕ ಹಳ್ಳಿಗಳು ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿವೆ. ಅವುಗಳ ಅಭಿವೃದ್ಧಿ ಹೆಚ್ಚಿನ ಗಮನ ನೀಡಬೇಕು’ ಎಂದು ಹೇಳಿದರು.