‘ಎಪಿಎಂಸಿಗಳನ್ನು ಮೇಲ್ದರ್ಜೆಗೇರಿಸಿ, ಅಗತ್ಯ ಸಿಬ್ಬಂದಿ ನೇಮಿಸಬೇಕು. ಕಮಿಷನ್ ಹಾವಳಿ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕು. ಬೆಳೆ ಸಾಲವನ್ನು ಎಕರೆಗೆ ₹ 1 ಲಕ್ಷದವರೆಗೆ ಹೆಚ್ಚಿಸಬೇಕು. ಬೆಳಗಾವಿಯಲ್ಲಿ ಮಾವು ಮತ್ತು ದ್ರಾಕ್ಷಿ ಸಂರಕ್ಷಣಾ ಘಟಕಗಳನ್ನು ಪ್ರಾರಂಭಿಸಬೇಕು. ರಸಗೊಬ್ಬರ, ಬಿತ್ತನೆ ಬೀಜ, ಔಷಧಗಳನ್ನು ಜಿಎಸ್ಟಿಯಿಂದ ಮುಕ್ತಗೊಳಿಸಬೇಕು. ಫಸಲ್ ಬಿಮಾ ಯೋಜನೆಯನ್ನು ಕಬ್ಬು ಬೆಳೆಗೂ ವಿಸ್ತರಿಸಬೇಕು. ಹೊಲಗಳಿಗೆ ಸಂಪರ್ಕ ರಸ್ತೆ ಕಲ್ಪಿಸುವ ಯೋಜನೆ ಜಾರಿಗೊಳಿಸಬೇಕು. ಯಶಸ್ವಿನಿ ವಿಮಾ ಯೋಜನೆ ಪುನರಾರಂಭಿಸಬೇಕು’ ಎಂದು ಆಗ್ರಹಿಸಿದರು.