‘ರೈತರು, ಕೃಷಿ ಕಾರ್ಮಿಕರು, ಕೂಲಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರೂ ಜಿಲ್ಲಾಧಿಕಾರಿ, ಆಹಾರ ಇಲಾಖೆ, ಕಾರ್ಮಿಕ ಇಲಾಖೆ ಅಧಿಕಾರಿ ಅಥವಾ ಸಕ್ಕರೆ ಆಯುಕ್ತರಾಗಲಿ ಸ್ಪಂದಿಸುತ್ತಿಲ್ಲ. ಕೊರೊನಾ ಭೀತಿ ಮುಂದಿಟ್ಟುಕೊಂಡು ಸಮಸ್ಯೆಗಳನ್ನು ಮರೆಮಾಚುವ ವ್ಯವಸ್ಥಿತ ತಂತ್ರವನ್ನು ಅಧಿಕಾರಿಗಳು ಅನುಸರಿಸುತ್ತಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.