<p>ಉಗರಗೋಳ: ‘ನಾವೆಲ್ಲರೂ ಗೋವನ್ನು ಪೂಜಿಸಿ ನಮ್ಮ ಧಾರ್ಮಿಕ ಪರಂಪರೆ ಮುಂದುವರಿಸಿಕೊಂಡು ಹೋಗಬೇಕು’ ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.</p>.<p>ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆ, ಪಶುಸಂಗೋಪನಾ ಇಲಾಖೆ ಹಾಗೂ ತಾಲ್ಲೂಕು ಆಡಳಿತದಿಂದ ದೀಪಾವಳಿ ಬಲಿಪಾಡ್ಯಮಿ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಗೋಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ರೈತರಿಗೆ ಗೋವು ಆಧಾರವಾಗಿವೆ. ಗೋವಿನ ಸಗಣಿ, ಗಂಜಲದಿಂದ ಭೂಮಿ ಫಲವತ್ತತೆಯೂ ಹೆಚ್ಚುತ್ತದೆ. ಆದ್ದರಿಂದ ಅವುಗಳ ರಕ್ಷಣೆಗಾಗಿ ಎಲ್ಲರೂ ಶ್ರಮಿಸಬೇಕು’ ಎಂದರು.</p>.<p>ಇದೇ ವೇಳೆ ದೇವಸ್ಥಾನದಲ್ಲಿ ಕಾರ್ತೀಕೋತ್ಸವಕ್ಕೂ ಚಾಲನೆ ನೀಡಿದರು.</p>.<p>ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೊಳ್ಳಪ್ಪಗೌಡ ಗಂದಿಗವಾಡ, ಲಕ್ಷ್ಮಿ ಹೂಲಿ, ವೈ.ವೈ. ಕಾಳಪ್ಪನವರ, ರಾಮದುರ್ಗ ಡಿವೈಎಸ್ಪಿ ರಾಮನಗೌಡ ಹಟ್ಟಿ, ಗ್ರೇಡ್-2 ತಹಶೀಲ್ದಾರ್ ಗುಂಡಪ್ಪಗೊಳ, ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಮಾಳಗೆ, ಎಂಜಿನಿಯರ್ ಎಂ.ವಿ. ಮುಳ್ಳೂರ, ಸಿಪಿಐ ಮಂಜುನಾಥ ನಡುವಿನಮನಿ, ಕಿರಣ ಶಿಂಧೆ, ಕಿರಣ ಮಹೇಂದ್ರಕರ, ವಿನಯ ಮಹೇಂದ್ರಕರ, ಸುರೇಶ ಗಾಣಿಗೇರ, ಡಾ.ಪ್ರಮೋದ ಮೂಡಲಗಿ, ಡಾ.ಅನಿಲ ಮರಲಿಂಗನವರ, ಬಸಪ್ಪ ಸಿದ್ದಕ್ಕನವರ, ಎಸ್.ಎಸ್. ಒಣಕಿ, ರಾಜು ಬೆಳವಡಿ, ವಿ.ಪಿ. ಸೊನ್ನದ, ಪಂಡಿತ ಯಡೂರಯ್ಯ, ಪಂಡಿತ ರಾಜಶೇಖರಯ್ಯ, ವಿಶ್ವನಾಥಗೌಡ ಲಿಂಗಋಷಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಗರಗೋಳ: ‘ನಾವೆಲ್ಲರೂ ಗೋವನ್ನು ಪೂಜಿಸಿ ನಮ್ಮ ಧಾರ್ಮಿಕ ಪರಂಪರೆ ಮುಂದುವರಿಸಿಕೊಂಡು ಹೋಗಬೇಕು’ ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.</p>.<p>ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆ, ಪಶುಸಂಗೋಪನಾ ಇಲಾಖೆ ಹಾಗೂ ತಾಲ್ಲೂಕು ಆಡಳಿತದಿಂದ ದೀಪಾವಳಿ ಬಲಿಪಾಡ್ಯಮಿ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಗೋಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ರೈತರಿಗೆ ಗೋವು ಆಧಾರವಾಗಿವೆ. ಗೋವಿನ ಸಗಣಿ, ಗಂಜಲದಿಂದ ಭೂಮಿ ಫಲವತ್ತತೆಯೂ ಹೆಚ್ಚುತ್ತದೆ. ಆದ್ದರಿಂದ ಅವುಗಳ ರಕ್ಷಣೆಗಾಗಿ ಎಲ್ಲರೂ ಶ್ರಮಿಸಬೇಕು’ ಎಂದರು.</p>.<p>ಇದೇ ವೇಳೆ ದೇವಸ್ಥಾನದಲ್ಲಿ ಕಾರ್ತೀಕೋತ್ಸವಕ್ಕೂ ಚಾಲನೆ ನೀಡಿದರು.</p>.<p>ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೊಳ್ಳಪ್ಪಗೌಡ ಗಂದಿಗವಾಡ, ಲಕ್ಷ್ಮಿ ಹೂಲಿ, ವೈ.ವೈ. ಕಾಳಪ್ಪನವರ, ರಾಮದುರ್ಗ ಡಿವೈಎಸ್ಪಿ ರಾಮನಗೌಡ ಹಟ್ಟಿ, ಗ್ರೇಡ್-2 ತಹಶೀಲ್ದಾರ್ ಗುಂಡಪ್ಪಗೊಳ, ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಮಾಳಗೆ, ಎಂಜಿನಿಯರ್ ಎಂ.ವಿ. ಮುಳ್ಳೂರ, ಸಿಪಿಐ ಮಂಜುನಾಥ ನಡುವಿನಮನಿ, ಕಿರಣ ಶಿಂಧೆ, ಕಿರಣ ಮಹೇಂದ್ರಕರ, ವಿನಯ ಮಹೇಂದ್ರಕರ, ಸುರೇಶ ಗಾಣಿಗೇರ, ಡಾ.ಪ್ರಮೋದ ಮೂಡಲಗಿ, ಡಾ.ಅನಿಲ ಮರಲಿಂಗನವರ, ಬಸಪ್ಪ ಸಿದ್ದಕ್ಕನವರ, ಎಸ್.ಎಸ್. ಒಣಕಿ, ರಾಜು ಬೆಳವಡಿ, ವಿ.ಪಿ. ಸೊನ್ನದ, ಪಂಡಿತ ಯಡೂರಯ್ಯ, ಪಂಡಿತ ರಾಜಶೇಖರಯ್ಯ, ವಿಶ್ವನಾಥಗೌಡ ಲಿಂಗಋಷಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>