ಆ ಮುಖ್ಯಮಂತ್ರಿಯು ಯಲ್ಲಮ್ಮನಗುಡ್ಡಕ್ಕೆ ತೆರಳಿದ ವಿಷಯ ತಿಳಿದ ಕಳಸಾ ಬಂಡೂರಿ ಹೋರಾಟಗಾರರು ವಿನಯ ಕುಲಕರ್ಣಿ ನೇತೃತ್ವದಲ್ಲಿ ಮುತ್ತಿಗೆ ಹಾಕಲು ಮುನವಳ್ಳಿಯಲ್ಲಿ ಸೇರಿದ್ದರು. ಆದರೆ, ಸಾವಂತ್ ಅವರು ಸವದತ್ತಿ–ಇಮಾನಹೊಂಗಲ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳಿದರು. ಈ ವಿಷಯ ತಿಳಿದ ಹೋರಾಟಗಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಸರ್ಕಾರವು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.