<p>ಗೋಕಾಕ: ಒಟ್ಟು 31 ಚುನಾಯಿತ ಸದಸ್ಯರನ್ನು ಹೊಂದಿರುವ ಇಲ್ಲಿನ ನಗರಸಭೆಯ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ 'ಬ'ಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ‘ಸಾಮಾನ್ಯ ಮಹಿಳೆ’ಗೆ ಮೀಸಲಿಡಲಾಗಿದ್ದು, ಎರಡೂ ಸ್ಥಾನಗಳಿಗೆ ಆ.30ರಂದು ಮಧ್ಯಾಹ್ನ 2ಕ್ಕೆ ಚುನಾವಣೆ ನಡೆಯಲಿದೆ.</p>.<p>ಒಟ್ಟು ಚುನಾಯಿತ ಸದಸ್ಯರ ಪೈಕಿ 26 ಸದಸ್ಯರು ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಗುರುತಿಸಿಕೊಂಡಿದ್ದರೆ. ಇನ್ನುಳಿದ ಐವರು ಸದಸ್ಯರು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ.</p>.<p>ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಅರ್ಹತೆಯುಳ್ಳ ಚುನಾಯಿತ ಸದಸ್ಯರು ತಮ್ಮ-ತಮ್ಮ ಪ್ರಮುಖರೊಂದಿಗೆ ಶಾಸಕ ರಮೇಶ ಜಾರಕಿಹೊಳಿ ಅವರ ಮೂಲಕ ಸ್ಥಾನ ಗಿಟ್ಟಿಸಿಕೊಳ್ಳಲು ಹರಸಾಹಸ ನಡೆಸಿದ್ದಾರೆ.</p>.<p>ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ಬೆಳಿಗ್ಗೆ ನಗರಸಭೆಯ ಸದಸ್ಯರ ಸಭೆ ಕರೆದಿದ್ದು, ಅಲ್ಲಿ ಯಾರನ್ನು ಯಾವ ಸ್ಥಾನಕ್ಕೆ ಪರಿಗಣಿಸಬೇಕು ಎಂಬ ಚರ್ಚೆಗಳು ನಡೆಯಲಿವೆ ಎನ್ನಲಾಗಿದೆ.</p>.<p>ಚುನಾವಣಾ ಅಧಿಕಾರಿಯಾಗಿ ಬೈಲಹೊಂಗಲ ಉಪ-ವಿಭಾಗಾಧಿಕಾರಿ ಕಾರ್ಯನಿರ್ವಹಿಸಲಿದ್ದಾರೆ.</p>.<p>ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ನಾಮಪತ್ರ ಸಲ್ಲಿಸುವುದು, ಮಧ್ಯಾಹ್ನ 2ಕ್ಕೆ ನಾಮಪತ್ರಗಳ ಪರಿಶೀಲನೆ, ಮಧ್ಯಾಹ್ನ 2-15 ರಿಂದ 2-30 ವರೆಗೆ ನಾಮಪತ್ರ ಹಿಂತೆಗೆದುಕೊಳ್ಳುವುದು. ಅಗತ್ಯ ಬಿದ್ದಲ್ಲಿ ಮಧ್ಯಾಹ್ನ 2.30ಕ್ಕೆ ಮತದಾನ ನಡೆದು ಸಂಜೆ ಚುನಾವಣೆ ಫಲಿತಾಂಶ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಕಾಕ: ಒಟ್ಟು 31 ಚುನಾಯಿತ ಸದಸ್ಯರನ್ನು ಹೊಂದಿರುವ ಇಲ್ಲಿನ ನಗರಸಭೆಯ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ 'ಬ'ಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ‘ಸಾಮಾನ್ಯ ಮಹಿಳೆ’ಗೆ ಮೀಸಲಿಡಲಾಗಿದ್ದು, ಎರಡೂ ಸ್ಥಾನಗಳಿಗೆ ಆ.30ರಂದು ಮಧ್ಯಾಹ್ನ 2ಕ್ಕೆ ಚುನಾವಣೆ ನಡೆಯಲಿದೆ.</p>.<p>ಒಟ್ಟು ಚುನಾಯಿತ ಸದಸ್ಯರ ಪೈಕಿ 26 ಸದಸ್ಯರು ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಗುರುತಿಸಿಕೊಂಡಿದ್ದರೆ. ಇನ್ನುಳಿದ ಐವರು ಸದಸ್ಯರು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ.</p>.<p>ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಅರ್ಹತೆಯುಳ್ಳ ಚುನಾಯಿತ ಸದಸ್ಯರು ತಮ್ಮ-ತಮ್ಮ ಪ್ರಮುಖರೊಂದಿಗೆ ಶಾಸಕ ರಮೇಶ ಜಾರಕಿಹೊಳಿ ಅವರ ಮೂಲಕ ಸ್ಥಾನ ಗಿಟ್ಟಿಸಿಕೊಳ್ಳಲು ಹರಸಾಹಸ ನಡೆಸಿದ್ದಾರೆ.</p>.<p>ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ಬೆಳಿಗ್ಗೆ ನಗರಸಭೆಯ ಸದಸ್ಯರ ಸಭೆ ಕರೆದಿದ್ದು, ಅಲ್ಲಿ ಯಾರನ್ನು ಯಾವ ಸ್ಥಾನಕ್ಕೆ ಪರಿಗಣಿಸಬೇಕು ಎಂಬ ಚರ್ಚೆಗಳು ನಡೆಯಲಿವೆ ಎನ್ನಲಾಗಿದೆ.</p>.<p>ಚುನಾವಣಾ ಅಧಿಕಾರಿಯಾಗಿ ಬೈಲಹೊಂಗಲ ಉಪ-ವಿಭಾಗಾಧಿಕಾರಿ ಕಾರ್ಯನಿರ್ವಹಿಸಲಿದ್ದಾರೆ.</p>.<p>ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ನಾಮಪತ್ರ ಸಲ್ಲಿಸುವುದು, ಮಧ್ಯಾಹ್ನ 2ಕ್ಕೆ ನಾಮಪತ್ರಗಳ ಪರಿಶೀಲನೆ, ಮಧ್ಯಾಹ್ನ 2-15 ರಿಂದ 2-30 ವರೆಗೆ ನಾಮಪತ್ರ ಹಿಂತೆಗೆದುಕೊಳ್ಳುವುದು. ಅಗತ್ಯ ಬಿದ್ದಲ್ಲಿ ಮಧ್ಯಾಹ್ನ 2.30ಕ್ಕೆ ಮತದಾನ ನಡೆದು ಸಂಜೆ ಚುನಾವಣೆ ಫಲಿತಾಂಶ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>