<p><strong>ಗೋಕಾಕ</strong>: ‘ನಕಲು ರಹಿತ ಪರೀಕ್ಷೆ ನಡೆಸಲು ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಮುತುವರ್ಜಿ ವಹಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ ಹೇಳಿದರು.</p>.<p>ಇಲ್ಲಿನ ಜೆ.ಎಸ್.ಎಸ್. ಕಾಲೇಜಿನ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂಗವಾಗಿ ಮಂಗಳವಾರ ನಡೆದ ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ಪರೀಕ್ಷೆ ಪ್ರಾರಂಭದಿಂದ ಮುಗಿಯುವವರೆಗೆ ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರೊಂದಿಗೆ ಮೂರು ಜನ ಉನ್ನತ ಅಧಿಕಾರಿಗಳ ತಂಡ ನಿಯೋಜಿಸಲಾಗಿರುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇರುತ್ತದೆ. ವಲಯದ ಎಲ್ಲ ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಸಹಕರಿಸಬೇಕು’ ಎಂದರು.</p>.<p>‘ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ವಿತರಿಸುವಾಗ ಎಚ್ಚರ ವಹಿಸಬೇಕು. ಪರೀಕ್ಷಾ ಕೊಠಡಿಯಲ್ಲಿ ಆಕಸ್ಮಿಕವಾಗಿ ನಡೆಯುವ ಸಣ್ಣ ತಪ್ಪುಗಳಿಂದ ಪರೀಕ್ಷಾರ್ಥಿಗಳು ತೊಂದರೆ ಅನುಭವಿಸಬಹುದು. ಹೀಗಾಗದಂತೆ ಕ್ರಮ ವಹಿಸಿ’ ಎಂದು ಸಲಹೆ ನೀಡಿದರು.</p>.<p>ತಹಶೀಲ್ದಾರ್ ಮೋಹನ ಭಸ್ಮೆ, ಪಿಎಸ್ಐ ಕೆ. ವಾಲಿಕರ, ನೋಡಲ್ ಅಧಿಕಾರಿ ಬಿ.ಎಂ.ವಣ್ಣೂರ, ಆರ್.ಎಂ. ದೇಶಪಾಂಡೆ, ಜಿ.ಎನ್. ಸಾಂಗಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ</strong>: ‘ನಕಲು ರಹಿತ ಪರೀಕ್ಷೆ ನಡೆಸಲು ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಮುತುವರ್ಜಿ ವಹಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ ಹೇಳಿದರು.</p>.<p>ಇಲ್ಲಿನ ಜೆ.ಎಸ್.ಎಸ್. ಕಾಲೇಜಿನ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂಗವಾಗಿ ಮಂಗಳವಾರ ನಡೆದ ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ಪರೀಕ್ಷೆ ಪ್ರಾರಂಭದಿಂದ ಮುಗಿಯುವವರೆಗೆ ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರೊಂದಿಗೆ ಮೂರು ಜನ ಉನ್ನತ ಅಧಿಕಾರಿಗಳ ತಂಡ ನಿಯೋಜಿಸಲಾಗಿರುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇರುತ್ತದೆ. ವಲಯದ ಎಲ್ಲ ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಸಹಕರಿಸಬೇಕು’ ಎಂದರು.</p>.<p>‘ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ವಿತರಿಸುವಾಗ ಎಚ್ಚರ ವಹಿಸಬೇಕು. ಪರೀಕ್ಷಾ ಕೊಠಡಿಯಲ್ಲಿ ಆಕಸ್ಮಿಕವಾಗಿ ನಡೆಯುವ ಸಣ್ಣ ತಪ್ಪುಗಳಿಂದ ಪರೀಕ್ಷಾರ್ಥಿಗಳು ತೊಂದರೆ ಅನುಭವಿಸಬಹುದು. ಹೀಗಾಗದಂತೆ ಕ್ರಮ ವಹಿಸಿ’ ಎಂದು ಸಲಹೆ ನೀಡಿದರು.</p>.<p>ತಹಶೀಲ್ದಾರ್ ಮೋಹನ ಭಸ್ಮೆ, ಪಿಎಸ್ಐ ಕೆ. ವಾಲಿಕರ, ನೋಡಲ್ ಅಧಿಕಾರಿ ಬಿ.ಎಂ.ವಣ್ಣೂರ, ಆರ್.ಎಂ. ದೇಶಪಾಂಡೆ, ಜಿ.ಎನ್. ಸಾಂಗಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>