<p><strong>ಗೋಕಾಕ:</strong> ‘ರಾಜ್ಯ ಸರ್ಕಾರವು ಕೃಷಿಕರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ. ಬೆಳೆಗೆ ನ್ಯಾಯಸಮ್ಮತ ಬೆಲೆ ಒದಗಿಸುವಂತೆ ಕೃಷಿಕರು ಹೋರಾಟ ನಡೆಸುತ್ತಿದ್ದರೆ, ಅದಕ್ಕೆ ತದ್ವಿರುದ್ಧವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದು ಆತಂಕಕಾರಿಯಾಗಿದೆ’ ಎಂದು ರೈತ ಮುಖಂಡ ಭೀಮಶಿ ಗದಾಡಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರೊಂದಿಗೆ ಬುಧವಾರ ಇಲ್ಲಿನ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರಿಗೆ ಮನವಿ ಸಲ್ಲಿಸಿದ ನಂತರ ಅವರು ಮಾತನಾಡಿದರು.</p>.<p>‘ತಿದ್ದುಪಡಿಯಿಂದ ರೈತರ ಬದುಕು ಅತಂತ್ರಗೊಳ್ಳಲಿದೆ. ಸರ್ಕಾರಕ್ಕೆ ಕೃಷಿಕರ ಪರ ಕಾಳಜಿ ಇದ್ದಲ್ಲಿ ಕಾಯ್ದೆ ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಸಂಘದ ಮುಖಂಡರಾದ ಗಣಪತಿ ಈಳಿಗೇರ, ಸತ್ತೆಪ್ಪ ಮಲ್ಲಾಪೂರೆ, ಮಂಜುನಾಥ ಪೂಜೇರಿ, ಗೋಪಾಲ ಕುಕನೂರ, ಭರಮು ಖೇಮಲಾಪೂರೆ, ಯಲ್ಲಪ್ಪ ತಿಗಡಿ, ಶಂಕರ ಮದಿಹಳ್ಳಿ, ಮಹಾದೇವ ಗೋಡೇರ, ಮುತ್ತೆಪ್ಪ ಕುರುಬರ, ಬಸು ನಾಯ್ಕ, ಶಿವಾನಂದ ಈಳಿಗೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ:</strong> ‘ರಾಜ್ಯ ಸರ್ಕಾರವು ಕೃಷಿಕರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ. ಬೆಳೆಗೆ ನ್ಯಾಯಸಮ್ಮತ ಬೆಲೆ ಒದಗಿಸುವಂತೆ ಕೃಷಿಕರು ಹೋರಾಟ ನಡೆಸುತ್ತಿದ್ದರೆ, ಅದಕ್ಕೆ ತದ್ವಿರುದ್ಧವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದು ಆತಂಕಕಾರಿಯಾಗಿದೆ’ ಎಂದು ರೈತ ಮುಖಂಡ ಭೀಮಶಿ ಗದಾಡಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರೊಂದಿಗೆ ಬುಧವಾರ ಇಲ್ಲಿನ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರಿಗೆ ಮನವಿ ಸಲ್ಲಿಸಿದ ನಂತರ ಅವರು ಮಾತನಾಡಿದರು.</p>.<p>‘ತಿದ್ದುಪಡಿಯಿಂದ ರೈತರ ಬದುಕು ಅತಂತ್ರಗೊಳ್ಳಲಿದೆ. ಸರ್ಕಾರಕ್ಕೆ ಕೃಷಿಕರ ಪರ ಕಾಳಜಿ ಇದ್ದಲ್ಲಿ ಕಾಯ್ದೆ ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಸಂಘದ ಮುಖಂಡರಾದ ಗಣಪತಿ ಈಳಿಗೇರ, ಸತ್ತೆಪ್ಪ ಮಲ್ಲಾಪೂರೆ, ಮಂಜುನಾಥ ಪೂಜೇರಿ, ಗೋಪಾಲ ಕುಕನೂರ, ಭರಮು ಖೇಮಲಾಪೂರೆ, ಯಲ್ಲಪ್ಪ ತಿಗಡಿ, ಶಂಕರ ಮದಿಹಳ್ಳಿ, ಮಹಾದೇವ ಗೋಡೇರ, ಮುತ್ತೆಪ್ಪ ಕುರುಬರ, ಬಸು ನಾಯ್ಕ, ಶಿವಾನಂದ ಈಳಿಗೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>