<p><strong>ಘಟಪ್ರಭಾ (ಗೋಕಾಕ): </strong>ಸಂಕೇಶ್ವರ-ನರಗುಂದ ರಾಜ್ಯ ಹೆದ್ದಾರಿಯ ಭಾಗವಾಗಿರುವ ಇಲ್ಲಿಗೆ ಸಮೀಪದ ಘಟಪ್ರಭಾ ಎಡದಂಡೆ ಕಾಲುವೆಗೆ ಅಡ್ಡಲಾಗಿ ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಿರಬಹುದಾದ ಹಳೆಯ ಸೇತುವೆ ಮೇಲೆ ಮಂಗಳವಾರ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸೇತುವೆ ಮೇಲಿನ ಜನ ಮತ್ತು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.</p>.<p>ಕರ್ನಾಟಕ ನೀರಾವರಿ ಇಲಾಖೆಯಿಂದ ನಿರ್ಮಿಸಿದ ಈ ಕಿರಿದಾದ ಸೇತುವೆ ಅಡಿಯಲ್ಲಿ ಕಲ್ಲಿನ ಬಾಂಧಕಂಬವು ಕುಸಿದ ಪರಿಣಾಮ ಸೇತುವೆಯಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ.</p>.<p>ದಿಢೀರ್ ಸೇತುವೆ ಕುಸಿತದಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಪರ್ಯಾಯ ಮಾರ್ಗವಾಗಿ ವಾಹನಗಳು ಗೋಕಾಕ-ಫಾಲ್ಸ್ ಮತ್ತು ಧುಪದಾಳ ಮಾರ್ಗವಾಗಿ ಓಡಾಡುತ್ತಿವೆ.</p>.<p>ಈ ಕುರಿತ ಮಾಹಿತಿ ಲಭಿಸುತ್ತಲೇ ನೀರಾವರಿ, ಲೋಕೋಪಯೋಗಿ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಸೇತುವೆ ಪುನರ್ ನಿರ್ಮಾಣಕ್ಕೆ ಹಲವು ತಿಂಗಳುಗಳ ಅವಧಿ ತೆಗೆದುಕೊಳ್ಳಬಹುದು ಎಂದು ಸಂಬಂಧಿಸಿದ ಅಧಿಕಾರಿಗಳು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಘಟಪ್ರಭಾ (ಗೋಕಾಕ): </strong>ಸಂಕೇಶ್ವರ-ನರಗುಂದ ರಾಜ್ಯ ಹೆದ್ದಾರಿಯ ಭಾಗವಾಗಿರುವ ಇಲ್ಲಿಗೆ ಸಮೀಪದ ಘಟಪ್ರಭಾ ಎಡದಂಡೆ ಕಾಲುವೆಗೆ ಅಡ್ಡಲಾಗಿ ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಿರಬಹುದಾದ ಹಳೆಯ ಸೇತುವೆ ಮೇಲೆ ಮಂಗಳವಾರ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸೇತುವೆ ಮೇಲಿನ ಜನ ಮತ್ತು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.</p>.<p>ಕರ್ನಾಟಕ ನೀರಾವರಿ ಇಲಾಖೆಯಿಂದ ನಿರ್ಮಿಸಿದ ಈ ಕಿರಿದಾದ ಸೇತುವೆ ಅಡಿಯಲ್ಲಿ ಕಲ್ಲಿನ ಬಾಂಧಕಂಬವು ಕುಸಿದ ಪರಿಣಾಮ ಸೇತುವೆಯಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ.</p>.<p>ದಿಢೀರ್ ಸೇತುವೆ ಕುಸಿತದಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಪರ್ಯಾಯ ಮಾರ್ಗವಾಗಿ ವಾಹನಗಳು ಗೋಕಾಕ-ಫಾಲ್ಸ್ ಮತ್ತು ಧುಪದಾಳ ಮಾರ್ಗವಾಗಿ ಓಡಾಡುತ್ತಿವೆ.</p>.<p>ಈ ಕುರಿತ ಮಾಹಿತಿ ಲಭಿಸುತ್ತಲೇ ನೀರಾವರಿ, ಲೋಕೋಪಯೋಗಿ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಸೇತುವೆ ಪುನರ್ ನಿರ್ಮಾಣಕ್ಕೆ ಹಲವು ತಿಂಗಳುಗಳ ಅವಧಿ ತೆಗೆದುಕೊಳ್ಳಬಹುದು ಎಂದು ಸಂಬಂಧಿಸಿದ ಅಧಿಕಾರಿಗಳು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>