<p><strong>ಗೋಕಾಕ:</strong> ‘ಹುಕ್ಕೇರಿ ತಾಲ್ಲೂಕಿನ ಸಾರಾಪೂರ ಗ್ರಾಮದ ಶಾಂತಿನಾಥ ದಿಗಂಬರ್ ಜೈನ್ ಮಂದಿರ ವತಿಯಿಂದ ಸಮುದಾಯ ಭವನ ನಿರ್ಮಿಸಲು ₹50 ಲಕ್ಷ ಹಾಗೂ ಬಾಗೇವಾಡಿಯ ಆದಿನಾಥ ಭಸ್ತಿ ದೇವಸ್ಥಾನ ಕಮಿಟಿಯಿಂದ ಸಮುದಾಯ ಭವನ ನಿರ್ಮಿಸಲು ₹40 ಲಕ್ಷ ಅನುದಾನವನ್ನು ಸರ್ಕಾರ ಮಂಜೂರು ಮಾಡಿದೆ’ ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ಹುಕ್ಕೇರಿ ತಾಲೂಕಿನ 23 ಗ್ರಾಮಗಳಿಗೆ ಲೋಕೋಪಯೋಗಿ ಇಲಾಖೆಯಿಂದ ₹1 ಕೋಟಿ ವೆಚ್ಚದಲ್ಲಿ ಹೈಮಾಸ್ಟ್ ದೀಪ ಅಳವಡಿಸಲು ಆದೇಶಿಸಲಾಗಿದೆ’ ಎಂದರು. </p>.<p>‘ಹರಗಾಪುರ, ಹಡಲಗಾ, ಕೆ.ಎಸ್. ನಾಗನೂರು, ಶಿರಪೂರ ಗ್ರಾಮಗಳಲ್ಲಿ ವಾಲ್ಮೀಕಿ ಭವನ ನಿರ್ಮಿಸಲು ತಲಾ ₹20 ಲಕ್ಷ, 17 ಗ್ರಾಮಗಳಲ್ಲಿ ಬಿ.ಆರ್. ಅಂಬೇಡ್ಕರ್ ಭವನ ಹಾಗೂ ಬಾಬು ಜಗಜೀವನರಾಮ್ ಭವನ ನಿರ್ಮಿಸಲು ತಲಾ ₹20 ಲಕ್ಷ ಅನುದಾನ ಬಿಡಗಡೆ ಮಾಡಲಾಗಿದೆ. ಅಲ್ಪಸಂಖ್ಯಾತರ ಕಾಲೊನಿಗಳಲ್ಲಿಯೂ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ:</strong> ‘ಹುಕ್ಕೇರಿ ತಾಲ್ಲೂಕಿನ ಸಾರಾಪೂರ ಗ್ರಾಮದ ಶಾಂತಿನಾಥ ದಿಗಂಬರ್ ಜೈನ್ ಮಂದಿರ ವತಿಯಿಂದ ಸಮುದಾಯ ಭವನ ನಿರ್ಮಿಸಲು ₹50 ಲಕ್ಷ ಹಾಗೂ ಬಾಗೇವಾಡಿಯ ಆದಿನಾಥ ಭಸ್ತಿ ದೇವಸ್ಥಾನ ಕಮಿಟಿಯಿಂದ ಸಮುದಾಯ ಭವನ ನಿರ್ಮಿಸಲು ₹40 ಲಕ್ಷ ಅನುದಾನವನ್ನು ಸರ್ಕಾರ ಮಂಜೂರು ಮಾಡಿದೆ’ ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ಹುಕ್ಕೇರಿ ತಾಲೂಕಿನ 23 ಗ್ರಾಮಗಳಿಗೆ ಲೋಕೋಪಯೋಗಿ ಇಲಾಖೆಯಿಂದ ₹1 ಕೋಟಿ ವೆಚ್ಚದಲ್ಲಿ ಹೈಮಾಸ್ಟ್ ದೀಪ ಅಳವಡಿಸಲು ಆದೇಶಿಸಲಾಗಿದೆ’ ಎಂದರು. </p>.<p>‘ಹರಗಾಪುರ, ಹಡಲಗಾ, ಕೆ.ಎಸ್. ನಾಗನೂರು, ಶಿರಪೂರ ಗ್ರಾಮಗಳಲ್ಲಿ ವಾಲ್ಮೀಕಿ ಭವನ ನಿರ್ಮಿಸಲು ತಲಾ ₹20 ಲಕ್ಷ, 17 ಗ್ರಾಮಗಳಲ್ಲಿ ಬಿ.ಆರ್. ಅಂಬೇಡ್ಕರ್ ಭವನ ಹಾಗೂ ಬಾಬು ಜಗಜೀವನರಾಮ್ ಭವನ ನಿರ್ಮಿಸಲು ತಲಾ ₹20 ಲಕ್ಷ ಅನುದಾನ ಬಿಡಗಡೆ ಮಾಡಲಾಗಿದೆ. ಅಲ್ಪಸಂಖ್ಯಾತರ ಕಾಲೊನಿಗಳಲ್ಲಿಯೂ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>