<p><strong>ಪ್ರಜಾವಾಣಿ ವಾರ್ತೆ</strong></p>.<p><strong>ಗೋಕಾಕ:</strong> ಇಲ್ಲಿನ ನಗರಸಭೆಯಲ್ಲಿ 2024-25ನೇ ಸಾಲಿನ ಪರಿಷ್ಕೃತ ಆಯವ್ಯಯ ಮತ್ತು 2025-26ನೇ ಸಾಲಿನ ₹4.95 ಲಕ್ಷ ಉಳಿತಾಯದ ಬಜೆಟ್ ಅನ್ನು ಪೌರಾಯುಕ್ತ ಆರ್.ಪಿ. ಜಾಧವ ಮಂಡಿಸಿದರು.</p>.<p>15ನೇ ಹಣಕಾಸು ಆಯೋಗ ಮತ್ತು ರಾಜ್ಯ ಹಣಕಾಸು ಆಯೋಗದಿಂದ ಬಿಡುಗಡೆ ಆಗಬಹುದಾದ ಅನುದಾನದಲ್ಲಿ ಅಂದಾಜು ₹4.30 ಕೋಟಿಯಲ್ಲಿ ಹೊಸ ರಸ್ತೆ, ಚರಂಡಿ, ಉದ್ಯಾನ ಹಾಗೂ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಲಾಗುವುದು. ಒಟ್ಟಾರೆ ₹67.42 ಕೋಟಿಯ ಆದಾಯ ಮತ್ತು ₹67.37 ಕೋಟಿ ವೆಚ್ಚ ಅಂದಾಜು ಮಾಡಲಾಗಿದೆ’ ಎಂದರು.</p>.<p>‘ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಲಕ್ಷ್ಮಿದೇವಿ ಜಾತ್ರೆ ಅಂಗವಾಗಿ ಬಿಡುಗಡೆ ಆಗಬಹುದಾದ ಅನುದಾನದಲ್ಲಿ ರಸ್ತೆ, ಚರಂಡಿ, ವಿದ್ಯುತ್, ಶೌಚಾಲಯ ಹಾಗೂ ಇತರೆ ಮೂಲಸೌಕರ್ಯ ಕಲ್ಪಿಸಲು ₹30 ಕೋಟಿ ನಿರೀಕ್ಷಿಸಲಾಗಿದೆ.₹2.50 ಕೋಟಿ ಅನುದಾನದಲ್ಲಿ ವಾಣಿಜ್ಯ ಮಳಿಗೆಗಳ ಕಾಮಗಾರಿ ಮುಕ್ತಾಯಗೊಂಡಿದೆ’ ಎಂದು ತಿಳಿಸಿದರು.</p>.<p>ನಗರಸಭೆಯ ಸಂಪನ್ಮೂಲ ಹೆಚ್ಚಿಸಿಕೊಳ್ಳಲು ಮತ್ತು ವೆಚ್ಚಗಳ ನಿಯಂತ್ರಣಕ್ಕಾಗಿ ಸೂಚನೆ ನೀಡಲಾಯಿತು.</p>.<p>ಅಧ್ಯಕ್ಷ ಪ್ರಕಾಶ ಮುರಾರಿ, ಉಪಾಧ್ಯಕ್ಷೆ ಬಿ.ಎ. ಜಮಾದಾರ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ ಯಕ್ಕುಂಡಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿ.ವೈ. ಪಾಟೀಲ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಎಚ್. ಗಜಾಕೋಶ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಜಾವಾಣಿ ವಾರ್ತೆ</strong></p>.<p><strong>ಗೋಕಾಕ:</strong> ಇಲ್ಲಿನ ನಗರಸಭೆಯಲ್ಲಿ 2024-25ನೇ ಸಾಲಿನ ಪರಿಷ್ಕೃತ ಆಯವ್ಯಯ ಮತ್ತು 2025-26ನೇ ಸಾಲಿನ ₹4.95 ಲಕ್ಷ ಉಳಿತಾಯದ ಬಜೆಟ್ ಅನ್ನು ಪೌರಾಯುಕ್ತ ಆರ್.ಪಿ. ಜಾಧವ ಮಂಡಿಸಿದರು.</p>.<p>15ನೇ ಹಣಕಾಸು ಆಯೋಗ ಮತ್ತು ರಾಜ್ಯ ಹಣಕಾಸು ಆಯೋಗದಿಂದ ಬಿಡುಗಡೆ ಆಗಬಹುದಾದ ಅನುದಾನದಲ್ಲಿ ಅಂದಾಜು ₹4.30 ಕೋಟಿಯಲ್ಲಿ ಹೊಸ ರಸ್ತೆ, ಚರಂಡಿ, ಉದ್ಯಾನ ಹಾಗೂ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಲಾಗುವುದು. ಒಟ್ಟಾರೆ ₹67.42 ಕೋಟಿಯ ಆದಾಯ ಮತ್ತು ₹67.37 ಕೋಟಿ ವೆಚ್ಚ ಅಂದಾಜು ಮಾಡಲಾಗಿದೆ’ ಎಂದರು.</p>.<p>‘ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಲಕ್ಷ್ಮಿದೇವಿ ಜಾತ್ರೆ ಅಂಗವಾಗಿ ಬಿಡುಗಡೆ ಆಗಬಹುದಾದ ಅನುದಾನದಲ್ಲಿ ರಸ್ತೆ, ಚರಂಡಿ, ವಿದ್ಯುತ್, ಶೌಚಾಲಯ ಹಾಗೂ ಇತರೆ ಮೂಲಸೌಕರ್ಯ ಕಲ್ಪಿಸಲು ₹30 ಕೋಟಿ ನಿರೀಕ್ಷಿಸಲಾಗಿದೆ.₹2.50 ಕೋಟಿ ಅನುದಾನದಲ್ಲಿ ವಾಣಿಜ್ಯ ಮಳಿಗೆಗಳ ಕಾಮಗಾರಿ ಮುಕ್ತಾಯಗೊಂಡಿದೆ’ ಎಂದು ತಿಳಿಸಿದರು.</p>.<p>ನಗರಸಭೆಯ ಸಂಪನ್ಮೂಲ ಹೆಚ್ಚಿಸಿಕೊಳ್ಳಲು ಮತ್ತು ವೆಚ್ಚಗಳ ನಿಯಂತ್ರಣಕ್ಕಾಗಿ ಸೂಚನೆ ನೀಡಲಾಯಿತು.</p>.<p>ಅಧ್ಯಕ್ಷ ಪ್ರಕಾಶ ಮುರಾರಿ, ಉಪಾಧ್ಯಕ್ಷೆ ಬಿ.ಎ. ಜಮಾದಾರ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ ಯಕ್ಕುಂಡಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿ.ವೈ. ಪಾಟೀಲ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಎಚ್. ಗಜಾಕೋಶ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>