ಗೋಕಾಕ: ಮೋದಿ ಜನ್ಮ ದಿನಾಚರಣೆ

ಗೋಕಾಕ: ‘ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಸೇವೆ ಹಾಗೂ ಜಾಗೃತಿ ಕಾರ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ’ ಎಂದು ಪಕ್ಷದ ಗ್ರಾಮೀಣ ಘಟಕದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು.
ಮೋದಿ ಜನ್ಮದಿನ ಅಂಗವಾಗಿ ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕದಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಶಿವಾ ಪ್ರತಿಷ್ಠಾನದ ಮಕ್ಕಳಿಗೆ ಹಣ್ಣುಗಳನ್ನು ವಿತರಿಸಿ ಮಾತನಾಡಿದರು.
‘ಪಕ್ಷದಿಂದ 7 ದಿನಗಳವರೆಗೆ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡಲಾಗುವುದು. ನೈರ್ಮಲ್ಯ ಜಾಗೃತಿ ಮೂಡಿಸಲಾಗುವುದು’ ಎಂದರು.
ಮುಖಂಡರಾದ ಭೀಮಗೌಡ ಪೋಲಿಸಗೌಡರ, ಹನಮಂತ ದುರ್ಗನ್ನವರ, ಸುರೇಶ ಸನದಿ, ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.