ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕಾಕ: ಹೃದಯಾಘಾತದಿಂದ ಸೈನಿಕ ಶಂಕರ ಬಾಳಪ್ಪ ಯಲಿಗಾರ ಸಾವು

Last Updated 13 ಸೆಪ್ಟೆಂಬರ್ 2022, 17:48 IST
ಅಕ್ಷರ ಗಾತ್ರ

ಗೋಕಾಕ (ಬೆಳಗಾವಿ ಜಿಲ್ಲೆ): ಗೋಕಾಕ ತಾಲ್ಲೂಕಿನ ಮೇಲ್ಮಟ್ಟಿ ಗ್ರಾಮದವರಾದ, ಸೈನಿಕ ಶಂಕರ ಬಾಳಪ್ಪ ಯಲಿಗಾರ (33) ಅವರು ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಔರಂಗಾಬಾದನಲ್ಲಿ ಮಂಗಳವಾರ ಮಧ್ಯಾಹ್ನ ಕೆಲಸದಲ್ಲಿ ಇದ್ದಾಗಲೇ ಅವರಿಗೆ ಹೃದಯಾಘಾತವಾಯಿತು. ತಕ್ಷಣ ಅವರನ್ನು ಔರಂಗಾಬಾದನ ಮಿಲಿಟರಿ ಆಸ್ಪತ್ರೆಗೆ ಸೇರಿಸಲಾಯಿತು. ಅಷ್ಟೊತ್ತಿಗೆ ಅವರು ಕೊನೆಯುಸಿರು ಎಳೆದಿದ್ದರು ಎಂಬ ಮಾಹಿತಿ ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

ಮೃತದೇಹವನ್ನು ಮೇಲ್ಮಟ್ಟಿ ಗ್ರಾಮದ ಕಡೆಗೆ ತರಲಾಗುತ್ತಿದ್ದು, ಬುಧವಾರ ಬೆಳಿಗ್ಗೆ 8ರ ಸುಮಾರಿಗೆ ಸ್ವಗ್ರಾಮ ತಲುಪಲಿದೆ. ಗ್ರಾಮಸ್ಥರು ಶವವನ್ನು ಊರಲ್ಲಿ ಮೆರವಣಿಗೆ ಮಾಡಿ, ಅಂತ್ಯಸಂಸ್ಕಾರ ಮಾಡಲು ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT