‘ಗುಮ್ಮಟಗಳನ್ನು ₹ 1.5 ಕೋಟಿ ವೆಚ್ಚದಲ್ಲಿ ದುರಸ್ತಿಗೊಳಿಸಿದ್ದೇವೆ. ಸುತ್ತಲೂ ಫೆನ್ಸಿಂಗ್ ಅಳವಡಿಸಲಾಗಿದೆ. ಪ್ರವಾಸಿಗರು ಕುಳಿತುಕೊಂಡು ಸೌಂದರ್ಯ ಸವಿಯಲು ಅನುವಾಗುವಂತೆ ಆಸನಗಳನ್ನು ಹಾಕುತ್ತಿದ್ದೇವೆ. ಈ ಸ್ಮಾರಕಗಳನ್ನು ಪುರಾತತ್ವ ಇಲಾಖೆ ಅಧೀನಕ್ಕೆ ಪಡೆದುಕೊಂಡು ನಿರ್ವಹಿಸಿದರೆ, ನಮ್ಮ ಪ್ರಯತ್ನ ಸಾರ್ಥಕವಾಗುತ್ತದೆ’ ಎಂದು ಲೋಕೋಪಯೋಗಿ ಇಲಾಖೆ ಎಇಇ ವಿ.ಎನ್. ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.