<p><strong>ಉಗರಗೋಳ:</strong> ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ‘ಗೌರಿ ಹುಣ್ಣಿಮೆ’ ಅಂಗವಾಗಿ ಶುಕ್ರವಾರ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.</p>.<p>ಆದಿಶಕ್ತಿ ರೇಣುಕಾ ಯಲ್ಲಮ್ಮನ ಸನ್ನಿಧಿಗೆ ಭಕ್ತಸಾಗರವೆ ಹರಿದುಬಂದಿತ್ತು. ಜೋರು ಮಳೆಯನ್ನೂ ಲೆಕ್ಕಿಸದೆ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದು ಪುನೀತ ಭಾವ ತಳೆದರು.</p>.<p>ಗುರುವಾರ ಮಧ್ಯ ರಾತ್ರಿ ಆರಂಭವಾದ ಮಳೆ ಶುಕ್ರವಾರ ಸಂಜೆಯವರೆಗೂ ಮುಂದುವರಿದಿತ್ತು. ಆದರೆ, ಭಕ್ತರ ಆಗಮನ ನಿಂತಿರಲಿಲ್ಲ.</p>.<p>ಕರ್ನಾಟಕದೊಂದಿಗೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಂದಲೂ ಸಹಸ್ರಾರು ಭಕ್ತರು ಗುಡ್ಡದತ್ತ ಹೆಜ್ಜೆ ಹಾಕಿದರು. ಯಲ್ಲಮ್ಮ ದೇವಸ್ಥಾನದಿಂದ ಪ್ರವೇಶದ್ವಾರದವರೆಗೂ ಸಾವಿರಾರು ಸಂಖ್ಯೆಯಲ್ಲಿ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತಿದ್ದರು. ಮಕ್ಕಳು, ಯುವಕ-ಯುವತಿಯರು, ಮಹಿಳೆಯರು, ಹಿರಿಯರು ಕೊಡೆಗಳ ಆಸರೆಯಲ್ಲಿ ಬಂದರು. ‘ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ’ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಮಳೆಯಿಂದಾಗಿ ವ್ಯಾಪಾರ- ವಹಿವಾಟಿಗೆ ತೊಡಕಾಯಿತು. ಕುಂಕುಮ-ಭಂಡಾರ, ಕಾಯಿ, ಕರ್ಪೂರ ಮಾರುವ ವ್ಯಾಪಾರಿಗಳಿಗೆ ತೊಂದರೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಗರಗೋಳ:</strong> ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ‘ಗೌರಿ ಹುಣ್ಣಿಮೆ’ ಅಂಗವಾಗಿ ಶುಕ್ರವಾರ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.</p>.<p>ಆದಿಶಕ್ತಿ ರೇಣುಕಾ ಯಲ್ಲಮ್ಮನ ಸನ್ನಿಧಿಗೆ ಭಕ್ತಸಾಗರವೆ ಹರಿದುಬಂದಿತ್ತು. ಜೋರು ಮಳೆಯನ್ನೂ ಲೆಕ್ಕಿಸದೆ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದು ಪುನೀತ ಭಾವ ತಳೆದರು.</p>.<p>ಗುರುವಾರ ಮಧ್ಯ ರಾತ್ರಿ ಆರಂಭವಾದ ಮಳೆ ಶುಕ್ರವಾರ ಸಂಜೆಯವರೆಗೂ ಮುಂದುವರಿದಿತ್ತು. ಆದರೆ, ಭಕ್ತರ ಆಗಮನ ನಿಂತಿರಲಿಲ್ಲ.</p>.<p>ಕರ್ನಾಟಕದೊಂದಿಗೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಂದಲೂ ಸಹಸ್ರಾರು ಭಕ್ತರು ಗುಡ್ಡದತ್ತ ಹೆಜ್ಜೆ ಹಾಕಿದರು. ಯಲ್ಲಮ್ಮ ದೇವಸ್ಥಾನದಿಂದ ಪ್ರವೇಶದ್ವಾರದವರೆಗೂ ಸಾವಿರಾರು ಸಂಖ್ಯೆಯಲ್ಲಿ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತಿದ್ದರು. ಮಕ್ಕಳು, ಯುವಕ-ಯುವತಿಯರು, ಮಹಿಳೆಯರು, ಹಿರಿಯರು ಕೊಡೆಗಳ ಆಸರೆಯಲ್ಲಿ ಬಂದರು. ‘ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ’ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಮಳೆಯಿಂದಾಗಿ ವ್ಯಾಪಾರ- ವಹಿವಾಟಿಗೆ ತೊಡಕಾಯಿತು. ಕುಂಕುಮ-ಭಂಡಾರ, ಕಾಯಿ, ಕರ್ಪೂರ ಮಾರುವ ವ್ಯಾಪಾರಿಗಳಿಗೆ ತೊಂದರೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>