ಕರ್ನಾಟಕದೊಂದಿಗೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಂದಲೂ ಸಹಸ್ರಾರು ಭಕ್ತರು ಗುಡ್ಡದತ್ತ ಹೆಜ್ಜೆ ಹಾಕಿದರು. ಯಲ್ಲಮ್ಮ ದೇವಸ್ಥಾನದಿಂದ ಪ್ರವೇಶದ್ವಾರದವರೆಗೂ ಸಾವಿರಾರು ಸಂಖ್ಯೆಯಲ್ಲಿ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತಿದ್ದರು. ಮಕ್ಕಳು, ಯುವಕ-ಯುವತಿಯರು, ಮಹಿಳೆಯರು, ಹಿರಿಯರು ಕೊಡೆಗಳ ಆಸರೆಯಲ್ಲಿ ಬಂದರು. ‘ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ’ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಮಳೆಯಿಂದಾಗಿ ವ್ಯಾಪಾರ- ವಹಿವಾಟಿಗೆ ತೊಡಕಾಯಿತು. ಕುಂಕುಮ-ಭಂಡಾರ, ಕಾಯಿ, ಕರ್ಪೂರ ಮಾರುವ ವ್ಯಾಪಾರಿಗಳಿಗೆ ತೊಂದರೆಯಾಯಿತು.