<p><strong>ಬೆಳಗಾವಿ: </strong>‘ಪೊಲೀಸ್ ಇಲಾಖೆ ರಾಜ್ಯದಲ್ಲಿ ಉತ್ತಮ ಸೇವೆ ಒದಗಿಸುತ್ತಿದೆ. ಸಿಬ್ಬಂದಿಯು ನೆಮ್ಮದಿಯಿಂದ ಜೀವನ ನಡೆಸುವಂತಾಗಲೆಂದು 20 ಸಾವಿರ ವಸತಿಗೃಹ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಈಗಾಗಲೇ 10ಸಾವಿರ ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.</p>.<p>ತಾಲ್ಲೂಕಿನ ಮಚ್ಚೆಯಲ್ಲಿರುವ ಕೆಎಸ್ಆರ್ಪಿ 2ನೇ ಪಡೆಯ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದ ಕೆಎಸ್ಆರ್ಪಿ ಪೊಲೀಸ್ ಕಾನ್ಸ್ಟೆಬಲ್ ಪ್ರಶಿಕ್ಷಣಾರ್ಥಿಗಳ (216 ಮಂದಿ) 4ನೇ ತಂಡದ ನಿರ್ಗಮನ ಪಥಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯುವ ಸಮಯದಲ್ಲಿ, ಭಾರತೀಯರಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಾಮರ್ಥ್ಯವಿಲ್ಲ ಎಂದು ಹೇಳಿದ್ದರು. ಪ್ರಸ್ತುತ ನಮ್ಮ ದೇಶದಲ್ಲಿ ಪೊಲೀಸ್ ಪಡೆ ಶಿಸ್ತು, ಪ್ರಾಮಾಣಿಕತೆಯಿಂದ ಶಾಂತಿ ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಾಪಾಡುತ್ತಿದೆ’ ಎಂದು ತಿಳಿಸಿದರು.</p>.<p>‘ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಉತ್ತಮವಾಗಿ ಸೇವೆ ಸಲ್ಲಿಸುತ್ತಿದೆ. ಚುನಾವಣೆ ವೇಳೆ ಸೇರಿದಂತೆ ಎಲ್ಲ ಸಮಯದಲ್ಲೂ ಶಾಂತಿ ಸುವ್ಯವಸ್ಥೆ ಕಾಪಾಡಲು ಇಲಾಖೆಯು ಶೌರ್ಯ, ಸಾಹಸ, ಉತ್ತಮ ಕಾರ್ಯಕ್ಷಮತೆ ಪ್ರದರ್ಶಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದರು.</p>.<p>ಆಂತರಿಕ ಭದ್ರತೆ ಕಾಪಾಡಲು:</p>.<p>‘ಕೆಲವು ಸಮಾಜಘಾತಕರು ವಿದೇಶಿ ಏಜೆಂಟರ ಜೊತೆಗೆ ಕೈಜೋಡಿಸಿ ಆಂತರಿಕ ಶಾಂತಿ ಕೆಡಿಸುವ ಕಾರ್ಯ ಮಾಡುತ್ತಿದ್ದಾರೆ. ಅಂಥವರನ್ನು ಎದುರಿಸಿ ಆಂತರಿಕ ಭದ್ರತೆ ಕಾಪಾಡಲು ಇಲಾಖೆ ಗಟ್ಟಿಯಾಗಿ ನಿಂತಿದೆ’ ಎಂದು ತಿಳಿಸಿದರು.</p>.<p>‘ಒಂದೂವರೆ ವರ್ಷದಿಂದ ಪೊಲೀಸ್ ಠಾಣೆಗಳ ಉನ್ನತಿಗೆ ಕ್ರಮ ಕೈಗೊಳ್ಳಲಾಗಿದೆ. ₹ 200 ಕೋಟಿ ಮೀಸಲಿಟ್ಟು 100 ಪೊಲೀಸ್ ಠಾಣೆಗಳನ್ನು ಉನ್ನತ ದರ್ಜೆಯಲ್ಲಿ ನಿರ್ಮಾಣ ಮಾಡಲಾಗಿದೆ’ ಎಂದರು.</p>.<p>‘ರಾಜ್ಯದಲ್ಲಿ 950 ಎಸ್ಐ ಹುದ್ದೆಗಳು ಖಾಲಿ ಇವೆ. ಸದ್ಯದಲ್ಲೇ ನೇಮಕಾತಿ ಪ್ರಕ್ರಿಯೆ ಮಾಡಲಾಗುವುದು. ಪ್ರತಿ ವರ್ಷ 4ಸಾವಿರ ಪೊಲೀಸ್ ನೇಮಕಾತಿ ಮಾಡಲಾಗುತ್ತಿದೆ. ಲಕ್ಷ ಸಿಬ್ಬಂದಿಯಲ್ಲಿ 35ಸಾವಿರ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಕ್ರಮ ವಹಿಸಲಾಗಿದೆ’ ಎಂದು ಹೇಳಿದರು.</p>.<p>ಕ್ರೀಡಾಪಟುಗಳಿಗೆ ಉತ್ತೇಜನ:</p>.<p>‘ಕ್ರಿಡಾಪಟುಗಳಿಗೆ ಉತ್ತೇಜನ ನೀಡಲು, ರಾಜ್ಯ ಮಟ್ಟದ ಕ್ರಿಡೆಯಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಶೇ 2ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ’ ಎಂದರು.</p>.<p>ಕೆಎಸ್ಆರ್ಪಿ ಎಡಿಜಿಪಿ ಆಲೋಕ್ಕುಮಾರ್, ‘ಹೊಸದಾಗಿ ಕೆಲಸಕ್ಕೆ ಸೇರಿದ ಸಿಬ್ಬಂದಿಗೆ ಉತ್ತಮ ತರಬೇತಿ ನೀಡಿದ್ದೇವೆ. ಪ್ರವಾಹ ಭೀತಿ ಸಮಯದಲ್ಲಿ ವಿಪತ್ತು ನಿರ್ವಹಣೆ ಸಮಿತಿ ಜೊತೆಗೆ ಸೇರಿ ತರಬೇತಿ ಕೊಡಲಾಗಿದೆ’ ಎಂದು ತಿಳಿಸಿದರು.</p>.<p>ತರಬೇತಿಯಲ್ಲಿ ಉತ್ತಮ ಪ್ರದರ್ಶನ ತೋರಿ ಹೆಚ್ಚು ಅಂಕ ಪಡೆದ ಪ್ರಶಿಕ್ಷಾರ್ಥಿಗಳಿಗೆ ಸಚಿವರು ಬಹುಮಾನ ವಿತರಿಸಿದರು.</p>.<p>ಹೆಚ್ಚುವರಿ ತರಬೇತಿ ಶಾಲೆ ಕೆ.ಎಸ್.ಆರ್.ಪಿ. 2ನೇ ಪಡೆಯ ಪ್ರಾಂಶುಪಾಲ ಹಂಜಾ ಹುಸೇನ್ ಪ್ರಶಿಕ್ಷಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವರದಿ ವಾಚಿಸಿದರು.</p>.<p>ಕೆಎಸ್ಆರ್ಪಿ ಪೊಲೀಸ್ ಮಹಾನಿರೀಕ್ಷಕ ರವಿ ಎಸ್., ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಎಸ್ಪಿ ಲಕ್ಷ್ಮಣ ನಿಂಬರಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಪೊಲೀಸ್ ಇಲಾಖೆ ರಾಜ್ಯದಲ್ಲಿ ಉತ್ತಮ ಸೇವೆ ಒದಗಿಸುತ್ತಿದೆ. ಸಿಬ್ಬಂದಿಯು ನೆಮ್ಮದಿಯಿಂದ ಜೀವನ ನಡೆಸುವಂತಾಗಲೆಂದು 20 ಸಾವಿರ ವಸತಿಗೃಹ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಈಗಾಗಲೇ 10ಸಾವಿರ ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.</p>.<p>ತಾಲ್ಲೂಕಿನ ಮಚ್ಚೆಯಲ್ಲಿರುವ ಕೆಎಸ್ಆರ್ಪಿ 2ನೇ ಪಡೆಯ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದ ಕೆಎಸ್ಆರ್ಪಿ ಪೊಲೀಸ್ ಕಾನ್ಸ್ಟೆಬಲ್ ಪ್ರಶಿಕ್ಷಣಾರ್ಥಿಗಳ (216 ಮಂದಿ) 4ನೇ ತಂಡದ ನಿರ್ಗಮನ ಪಥಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯುವ ಸಮಯದಲ್ಲಿ, ಭಾರತೀಯರಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಾಮರ್ಥ್ಯವಿಲ್ಲ ಎಂದು ಹೇಳಿದ್ದರು. ಪ್ರಸ್ತುತ ನಮ್ಮ ದೇಶದಲ್ಲಿ ಪೊಲೀಸ್ ಪಡೆ ಶಿಸ್ತು, ಪ್ರಾಮಾಣಿಕತೆಯಿಂದ ಶಾಂತಿ ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಾಪಾಡುತ್ತಿದೆ’ ಎಂದು ತಿಳಿಸಿದರು.</p>.<p>‘ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಉತ್ತಮವಾಗಿ ಸೇವೆ ಸಲ್ಲಿಸುತ್ತಿದೆ. ಚುನಾವಣೆ ವೇಳೆ ಸೇರಿದಂತೆ ಎಲ್ಲ ಸಮಯದಲ್ಲೂ ಶಾಂತಿ ಸುವ್ಯವಸ್ಥೆ ಕಾಪಾಡಲು ಇಲಾಖೆಯು ಶೌರ್ಯ, ಸಾಹಸ, ಉತ್ತಮ ಕಾರ್ಯಕ್ಷಮತೆ ಪ್ರದರ್ಶಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದರು.</p>.<p>ಆಂತರಿಕ ಭದ್ರತೆ ಕಾಪಾಡಲು:</p>.<p>‘ಕೆಲವು ಸಮಾಜಘಾತಕರು ವಿದೇಶಿ ಏಜೆಂಟರ ಜೊತೆಗೆ ಕೈಜೋಡಿಸಿ ಆಂತರಿಕ ಶಾಂತಿ ಕೆಡಿಸುವ ಕಾರ್ಯ ಮಾಡುತ್ತಿದ್ದಾರೆ. ಅಂಥವರನ್ನು ಎದುರಿಸಿ ಆಂತರಿಕ ಭದ್ರತೆ ಕಾಪಾಡಲು ಇಲಾಖೆ ಗಟ್ಟಿಯಾಗಿ ನಿಂತಿದೆ’ ಎಂದು ತಿಳಿಸಿದರು.</p>.<p>‘ಒಂದೂವರೆ ವರ್ಷದಿಂದ ಪೊಲೀಸ್ ಠಾಣೆಗಳ ಉನ್ನತಿಗೆ ಕ್ರಮ ಕೈಗೊಳ್ಳಲಾಗಿದೆ. ₹ 200 ಕೋಟಿ ಮೀಸಲಿಟ್ಟು 100 ಪೊಲೀಸ್ ಠಾಣೆಗಳನ್ನು ಉನ್ನತ ದರ್ಜೆಯಲ್ಲಿ ನಿರ್ಮಾಣ ಮಾಡಲಾಗಿದೆ’ ಎಂದರು.</p>.<p>‘ರಾಜ್ಯದಲ್ಲಿ 950 ಎಸ್ಐ ಹುದ್ದೆಗಳು ಖಾಲಿ ಇವೆ. ಸದ್ಯದಲ್ಲೇ ನೇಮಕಾತಿ ಪ್ರಕ್ರಿಯೆ ಮಾಡಲಾಗುವುದು. ಪ್ರತಿ ವರ್ಷ 4ಸಾವಿರ ಪೊಲೀಸ್ ನೇಮಕಾತಿ ಮಾಡಲಾಗುತ್ತಿದೆ. ಲಕ್ಷ ಸಿಬ್ಬಂದಿಯಲ್ಲಿ 35ಸಾವಿರ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಕ್ರಮ ವಹಿಸಲಾಗಿದೆ’ ಎಂದು ಹೇಳಿದರು.</p>.<p>ಕ್ರೀಡಾಪಟುಗಳಿಗೆ ಉತ್ತೇಜನ:</p>.<p>‘ಕ್ರಿಡಾಪಟುಗಳಿಗೆ ಉತ್ತೇಜನ ನೀಡಲು, ರಾಜ್ಯ ಮಟ್ಟದ ಕ್ರಿಡೆಯಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಶೇ 2ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ’ ಎಂದರು.</p>.<p>ಕೆಎಸ್ಆರ್ಪಿ ಎಡಿಜಿಪಿ ಆಲೋಕ್ಕುಮಾರ್, ‘ಹೊಸದಾಗಿ ಕೆಲಸಕ್ಕೆ ಸೇರಿದ ಸಿಬ್ಬಂದಿಗೆ ಉತ್ತಮ ತರಬೇತಿ ನೀಡಿದ್ದೇವೆ. ಪ್ರವಾಹ ಭೀತಿ ಸಮಯದಲ್ಲಿ ವಿಪತ್ತು ನಿರ್ವಹಣೆ ಸಮಿತಿ ಜೊತೆಗೆ ಸೇರಿ ತರಬೇತಿ ಕೊಡಲಾಗಿದೆ’ ಎಂದು ತಿಳಿಸಿದರು.</p>.<p>ತರಬೇತಿಯಲ್ಲಿ ಉತ್ತಮ ಪ್ರದರ್ಶನ ತೋರಿ ಹೆಚ್ಚು ಅಂಕ ಪಡೆದ ಪ್ರಶಿಕ್ಷಾರ್ಥಿಗಳಿಗೆ ಸಚಿವರು ಬಹುಮಾನ ವಿತರಿಸಿದರು.</p>.<p>ಹೆಚ್ಚುವರಿ ತರಬೇತಿ ಶಾಲೆ ಕೆ.ಎಸ್.ಆರ್.ಪಿ. 2ನೇ ಪಡೆಯ ಪ್ರಾಂಶುಪಾಲ ಹಂಜಾ ಹುಸೇನ್ ಪ್ರಶಿಕ್ಷಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವರದಿ ವಾಚಿಸಿದರು.</p>.<p>ಕೆಎಸ್ಆರ್ಪಿ ಪೊಲೀಸ್ ಮಹಾನಿರೀಕ್ಷಕ ರವಿ ಎಸ್., ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಎಸ್ಪಿ ಲಕ್ಷ್ಮಣ ನಿಂಬರಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>