ಕಾಲೇಜಿನ ಪ್ರಾಂಶುಪಾಲೆ ಡಾ.ಜೆ.ಕೆ. ಬಾಗೇವಾಡಿ ಅಧ್ಯಕ್ಷತೆ ವಹಿಸಿದ್ದರು. ಈ ಶಾಲೆಗೆ ಪಿಎಂಶ್ರೀ ಯೋಜನೆ ಮಂಜೂರಾತಿಗಾಗಿ ಶ್ರಮಿಸಿದ ಮುಖ್ಯಾಧ್ಯಾಪಕ ಐ.ಬಿ. ವಸ್ತ್ರದ ಮತ್ತು ಮರಾಠಾ ಮಂಡಳ ಕಾಲೇಜಿನಿಂದ ಸೇವಾ ನಿವೃತ್ತಿ ಹೊಂದಿದ ಜೆ.ವಿ. ಬನೋಶಿ ಹಾಗೂ ಎನ್.ಎಸ್. ಪಾಟೀಲ ಅವರನ್ನು ಸತ್ಕರಿಸಲಾಯಿತು. ಸಸಿಗೆ ನೀರೆರೆಯುವ ಮೂಲಕ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ ವಿದ್ಯಾರ್ಥಿನಿಯರ ಬಳಕೆಗಾಗಿ ಮರಾಠಾ ಮಂಡಳ ಕಾಲೇಜಿನಿಂದ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವಸಂತ ದೇಸಾಯಿ ಬಹುಮಾನ ವಿತರಿಸಿದರು. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜೆ.ವಿ. ಬನೋಶಿ ಕಾರ್ಯಕ್ರಮ ನಿರ್ವಹಿಸಿದರು. ಪ್ರೊ. ಸಂದೀಪ ಪಾಧ್ಯೆ ಸ್ವಾಗತಿಸಿದರು. ಐ.ಟಿ.ಬಡಿಗೇರ ವಂದಿಸಿದರು.