<p><strong>ಬೆಳಗಾವಿ:</strong> ರಾಜ್ಯದಲ್ಲಿ ಕಡಿಮೆ ದಾಖಲಾತಿ ಇರುವ ಸರ್ಕಾರಿ ಶಾಲೆಗಳ ಉಳಿವಿಗಾಗಿ ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್ಒ) ಕಾರ್ಯಕರ್ತರು ಭಾನುವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.</p><p>ಜ್ಯೋತಿಬಾ ಫುಲೆ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳನ್ನು ಸಂಘಟನೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಹಿಡಿದು, ಸಾರ್ವಜನಿಕರಿಂದ ಸಹಿ ಸಂಗ್ರಹಿಸಿದರು.</p><p>ಎಐಡಿಎಸ್ಒ ಜಿಲ್ಲಾ ಘಟಕದ ಸಂಚಾಲಕ ಮಹಾಂತೇಶ ಬಿಳೂರ, ‘ಕಡಿಮೆ ದಾಖಲಾತಿ ಇರುವ 6 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಸರ್ಕಾರ ತಂತ್ರ ರೂಪಿಸಿದೆ. ಮಕ್ಕಳ ದಾಖಲಾತಿ ಕುಸಿತಕ್ಕೆ ಕಾರಣ ಪತ್ತೆಹೆಚ್ಚಿ ದಾಖಲಾತಿ ಹೆಚ್ಚಳಕ್ಕೆ ಕ್ರಮ ವಹಿಸುವ ಬದಲಿಗೆ, ವಿಲೀನಕ್ಕೆ ಮುಂದಾಗಿದ್ದು ಸರಿಯಲ್ಲ. ಸರ್ಕಾರದ ಈ ನಡೆ ವಿರೋಧಿಸಿ ರಾಜ್ಯವಿಡೀ 50 ಲಕ್ಷ ಜನರಿಂದ ಸಹಿ ಸಂಗ್ರಹ ಅಭಿಯಾನ ನಡೆಸುತ್ತಿದ್ದೇವೆ’ ಎಂದರು.</p><p>‘ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸುವ ಬದಲಿಗೆ, ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುತ್ತಿಲ್ಲ ಎಂದು ಪಾಲಕರ ಮೇಲೆಯೇ ಗೂಬೆ ಕೂರಿಸುತ್ತಿದೆ. ಹಂತ–ಹಂತವಾಗಿ ಸರ್ಕಾರಿ ಶಾಲೆ ಮುಚ್ಚಿ, ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸುವ ಹುನ್ನಾರ ಇದಾಗಿದೆ’ ಎಂದು ದೂರಿದರು.</p><p>ಹನುಮೇಶ, ಶಿವಾನಂದ, ಜೀವನ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ರಾಜ್ಯದಲ್ಲಿ ಕಡಿಮೆ ದಾಖಲಾತಿ ಇರುವ ಸರ್ಕಾರಿ ಶಾಲೆಗಳ ಉಳಿವಿಗಾಗಿ ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್ಒ) ಕಾರ್ಯಕರ್ತರು ಭಾನುವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.</p><p>ಜ್ಯೋತಿಬಾ ಫುಲೆ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳನ್ನು ಸಂಘಟನೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಹಿಡಿದು, ಸಾರ್ವಜನಿಕರಿಂದ ಸಹಿ ಸಂಗ್ರಹಿಸಿದರು.</p><p>ಎಐಡಿಎಸ್ಒ ಜಿಲ್ಲಾ ಘಟಕದ ಸಂಚಾಲಕ ಮಹಾಂತೇಶ ಬಿಳೂರ, ‘ಕಡಿಮೆ ದಾಖಲಾತಿ ಇರುವ 6 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಸರ್ಕಾರ ತಂತ್ರ ರೂಪಿಸಿದೆ. ಮಕ್ಕಳ ದಾಖಲಾತಿ ಕುಸಿತಕ್ಕೆ ಕಾರಣ ಪತ್ತೆಹೆಚ್ಚಿ ದಾಖಲಾತಿ ಹೆಚ್ಚಳಕ್ಕೆ ಕ್ರಮ ವಹಿಸುವ ಬದಲಿಗೆ, ವಿಲೀನಕ್ಕೆ ಮುಂದಾಗಿದ್ದು ಸರಿಯಲ್ಲ. ಸರ್ಕಾರದ ಈ ನಡೆ ವಿರೋಧಿಸಿ ರಾಜ್ಯವಿಡೀ 50 ಲಕ್ಷ ಜನರಿಂದ ಸಹಿ ಸಂಗ್ರಹ ಅಭಿಯಾನ ನಡೆಸುತ್ತಿದ್ದೇವೆ’ ಎಂದರು.</p><p>‘ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸುವ ಬದಲಿಗೆ, ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುತ್ತಿಲ್ಲ ಎಂದು ಪಾಲಕರ ಮೇಲೆಯೇ ಗೂಬೆ ಕೂರಿಸುತ್ತಿದೆ. ಹಂತ–ಹಂತವಾಗಿ ಸರ್ಕಾರಿ ಶಾಲೆ ಮುಚ್ಚಿ, ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸುವ ಹುನ್ನಾರ ಇದಾಗಿದೆ’ ಎಂದು ದೂರಿದರು.</p><p>ಹನುಮೇಶ, ಶಿವಾನಂದ, ಜೀವನ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>