ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ಸಂಪುಟ ಪುನರ್ರಚನೆ ವೇಳೆ ರಾಜ್ಯದ ನಾಲ್ವರಿಗೆ ಅವಕಾಶ ನೀಡಿ ಸಾಮಾಜಿಕ ನ್ಯಾಯವನ್ನು ಪಾಲಿಸಲಾಗಿದೆ. ಎಲ್ಲ ವರ್ಗದವರಿಗೂ ಅವಕಾಶ ಕೊಡಲಾಗಿದೆ. ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ, ಮೈಸೂರು ಭಾಗಕ್ಕೂ ಪ್ರಾನಿನಿಧ್ಯ ನೀಡಲಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಹಾಗೂ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದರು.