‘ಸಾವಿರಾರು ಅತಿಥಿ ಉಪನ್ಯಾಸಕರು ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಬಹು ಕಾಲದಿಂದ ಹೋರಾಡುತ್ತಿದ್ದಾರೆ. ತಿಂಗಳಿನಿಂದ ಅನಿರ್ದಿಷ್ಟಾವಧಿ ತರಗತಿ ಬಹಿಷ್ಕಾರ ಮಾಡಿದ್ದಾರೆ. ಹೀಗಾಗಿ ಒತ್ತಡಕ್ಕೆ ಸಿಲುಕಿದ್ದ ಸರ್ಕಾರ ಗೌರವಧನ ಹೆಚ್ಚಿಸುವುದಾಗಿ ಘೋಷಿಸಿದೆ. ಕಾರ್ಯಭಾರವನ್ನು 15 ಗಂಟೆಗಳಿಗೆ ಹೆಚ್ಚಿಸಿ ಅದಕ್ಕೆ ಅನುಗುಣವಾಗಿ ಗೌರವಧನ ಹೆಚ್ಚಿಸಿದಂತಾಗಿದೆಯಷ್ಟೆ. ಇದರಿಂದ ವೇತನ ತಾರತಮ್ಯ ನಿವಾರಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿದಂತೆ ಆಗುವುದಿಲ್ಲ’ ಎಂದು ಪ್ರತಿಪಾದಿಸಿದ್ದಾರೆ.