<p><strong>ಬೆಳಗಾವಿ: </strong>‘ಸಂಪೂರ್ಣ ಬತ್ತಿ ಹೋಗಿರುವ ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೋಯ್ನಾ ಅಥವಾ ವಾರ್ಣಾ ಜಲಾಶಯದಿಂದ 4 ಟಿಎಂಸಿ ನೀರು ಬಿಡುಗಡೆ ಮಾಡಬೇಕು’ ಎಂದು ಕೋರಿ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹಾರಾಷ್ಟ್ರ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಶುಕ್ರವಾರ ಪತ್ರ ಕಳುಹಿಸಿದ್ದಾರೆ.</p>.<p>ಮೇ 4ರಂದು ಮೊದಲ ಪತ್ರ ಬರೆಯಲಾಗಿತ್ತು.</p>.<p>‘ಮಹಾರಾಷ್ಟ್ರದ ಒತ್ತಾಯದಂತೆ ‘ನೀರು ವಿನಿಮಯ ಒಪ್ಪಂದ’ಕ್ಕೆ ಕರ್ನಾಟಕ ಸಿದ್ಧವಿದೆ. ಲೋಕಸಭಾ ಚುನಾವಣೆ ಮಾದರಿ ನೀತಿಸಂಹಿತೆ ಮುಗಿಯುವ ಮೇ 23ರ ನಂತರ ಈ ಕುರಿತು ಕ್ರಮ ಕೈಗೊಳ್ಳಲಾಗುವುದು. ಸದ್ಯ ತುರ್ತಾಗಿ 4 ಟಿಎಂಸಿ ನೀರು ಬಿಡುಗಡೆ ಮಾಡಬೇಕು’ ಎಂದು ಕೋರಲಾಗಿದೆ ಎಂದು ತಿಳಿದುಬಂದಿದೆ.</p>.<p>ಈ ಮಧ್ಯೆ, ಆ ರಾಜ್ಯದ ಸಾತಾರಾ ಜಿಲ್ಲೆಯ ಪಾಠಣ್ ಶಾಸಕ ಶಿವಸೇನೆಯ ಶಂಭುರಾಜ ದೇಸಾಯಿ, ‘ಕರ್ನಾಟಕಕ್ಕೆ ಕೋಯ್ನಾದಿಂದ ನೀರು ಬಿಡುಗಡೆ ಮಾಡಬಾರದು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಜಲಾಶಯದಲ್ಲಿ ಪ್ರಸ್ತುತ 34 ಟಿಎಂಸಿ ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 40 ಟಿಎಂಸಿ ಇತ್ತು. ಸದ್ಯ ವಿದ್ಯುತ್ ಉತ್ಪಾದನೆಗೆ 17 ಟಿಎಂಸಿ ಅವಶ್ಯವಾಗಿದೆ. ಹೀಗಾಗಿ, ನೀರು ಖಾಲಿ ಮಾಡುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.</p>.<p>‘ಸರ್ಕಾರವು ಕೇವಲ ಪತ್ರ ಬರೆದು ಸುಮ್ಮನಾಗುವ ಬದಲಿಗೆ, ಹಿರಿಯ ಅಧಿಕಾರಿಯನ್ನೇ ಮಹಾರಾಷ್ಟ್ರಕ್ಕೆ ಕಳುಹಿಸಿ ವ್ಯವಹರಿಸಬೇಕು. ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಹೋರಾಟಗಾರ ಅಶೋಕ ಚಂದರಗಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಸಂಪೂರ್ಣ ಬತ್ತಿ ಹೋಗಿರುವ ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೋಯ್ನಾ ಅಥವಾ ವಾರ್ಣಾ ಜಲಾಶಯದಿಂದ 4 ಟಿಎಂಸಿ ನೀರು ಬಿಡುಗಡೆ ಮಾಡಬೇಕು’ ಎಂದು ಕೋರಿ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹಾರಾಷ್ಟ್ರ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಶುಕ್ರವಾರ ಪತ್ರ ಕಳುಹಿಸಿದ್ದಾರೆ.</p>.<p>ಮೇ 4ರಂದು ಮೊದಲ ಪತ್ರ ಬರೆಯಲಾಗಿತ್ತು.</p>.<p>‘ಮಹಾರಾಷ್ಟ್ರದ ಒತ್ತಾಯದಂತೆ ‘ನೀರು ವಿನಿಮಯ ಒಪ್ಪಂದ’ಕ್ಕೆ ಕರ್ನಾಟಕ ಸಿದ್ಧವಿದೆ. ಲೋಕಸಭಾ ಚುನಾವಣೆ ಮಾದರಿ ನೀತಿಸಂಹಿತೆ ಮುಗಿಯುವ ಮೇ 23ರ ನಂತರ ಈ ಕುರಿತು ಕ್ರಮ ಕೈಗೊಳ್ಳಲಾಗುವುದು. ಸದ್ಯ ತುರ್ತಾಗಿ 4 ಟಿಎಂಸಿ ನೀರು ಬಿಡುಗಡೆ ಮಾಡಬೇಕು’ ಎಂದು ಕೋರಲಾಗಿದೆ ಎಂದು ತಿಳಿದುಬಂದಿದೆ.</p>.<p>ಈ ಮಧ್ಯೆ, ಆ ರಾಜ್ಯದ ಸಾತಾರಾ ಜಿಲ್ಲೆಯ ಪಾಠಣ್ ಶಾಸಕ ಶಿವಸೇನೆಯ ಶಂಭುರಾಜ ದೇಸಾಯಿ, ‘ಕರ್ನಾಟಕಕ್ಕೆ ಕೋಯ್ನಾದಿಂದ ನೀರು ಬಿಡುಗಡೆ ಮಾಡಬಾರದು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಜಲಾಶಯದಲ್ಲಿ ಪ್ರಸ್ತುತ 34 ಟಿಎಂಸಿ ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 40 ಟಿಎಂಸಿ ಇತ್ತು. ಸದ್ಯ ವಿದ್ಯುತ್ ಉತ್ಪಾದನೆಗೆ 17 ಟಿಎಂಸಿ ಅವಶ್ಯವಾಗಿದೆ. ಹೀಗಾಗಿ, ನೀರು ಖಾಲಿ ಮಾಡುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.</p>.<p>‘ಸರ್ಕಾರವು ಕೇವಲ ಪತ್ರ ಬರೆದು ಸುಮ್ಮನಾಗುವ ಬದಲಿಗೆ, ಹಿರಿಯ ಅಧಿಕಾರಿಯನ್ನೇ ಮಹಾರಾಷ್ಟ್ರಕ್ಕೆ ಕಳುಹಿಸಿ ವ್ಯವಹರಿಸಬೇಕು. ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಹೋರಾಟಗಾರ ಅಶೋಕ ಚಂದರಗಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>